ಸೀಮೆಎಣ್ಣೆ ಗೋದಾಮಿನಲ್ಲಿ ಭಾರೀ ಬೆಂಕಿ ಅನಾಹುತ ಉಂಟಾಗಿದ್ದು, ಅಪಾರ ನಾಶ ನಷ್ಟ ಉಂಟಾಗಿದೆ. ಕಾಸರಗೋಡು ನಗರದ ವಿದ್ಯಾನಗರದ ಬಳಿ ಗೋದಾಮಿನಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ದುರಂತ ನಡೆದ ಸಂದರ್ಭದಲ್ಲಿ ಗೋದಾಮಿನಲ್ಲಿ ಕಾರ್ಮಿಕರು ಇಲ್ಲದಿದ್ದುದರಿಂದ ಅಪಾಯ ತಪ್ಪಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಕಾಸರಗೋಡಿ ನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು.
ಮುನೀರ್ ಎಂಬವರ ಮಾಲಕತ್ವದ ಎರಡಂತಸ್ತಿನ ಕಟ್ಟಡದಲ್ಲಿ ಈ ಘಟನೆ ನಡೆದಿದ್ದು, ಅಗ್ನಿ ಶಾಮಕ ದಳ ಹಾಗೂ ಪರಿಸರ ವಾಸಿಗಳ ಸಕಾಲಿಕ ಕಾರ್ಯಾಚರಣೆಯಿಂದ ಭಾರೀ ಅನಾಹುತ ತಪ್ಪಿದೆ ಎನ್ನಲಾಗಿದೆ.ಬೆಂಕಿ ಅನಾಹುತ ಸಂಭವಿಸಿದ ಕೂಡಲೇ ಈ ಕಟ್ಟಡದಲ್ಲಿದ್ದವರನ್ನು ತೆರವು ಗೊಳಿಸಲಾಯಿತು. ಕಾಸರಗೋಡಿನಿಂದ ಆಗಮಿಸಿದ ಮೂರು ಅಗ್ನಿಶಾಮಕ ಘಟಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…