ಪಟಾಕಿ ವ್ಯಾಪಾರಿ ಕಾರನ್ನು ಅಡ್ಡಗಟ್ಟಿ ಹಣ ದೋಚಿ ದುಷ್ಕರ್ಮಿಗಳು ಪರಾರಿ | ಬೆಂಗಳೂರು ಬಳಿ ಘಟನೆ |

October 25, 2022
3:24 PM

ಪಟಾಕಿ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 20 ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾದ ಘಟನೆ ಬೆಂಗಳೂರಿನ ಅತ್ತಿಬೆಲೆ ಟೋಲ್ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಪಟಾಕಿ ವ್ಯಾಪಾರಿ ಚಂದ್ರಶೇಖರ್ ರೆಡ್ಡಿ ಎಂಬವರು ತಮ್ಮ  ವಾಹನದಲ್ಲಿ 20 ಲಕ್ಷ ರೂಪಾಯಿ ಹಣದೊಂದಿಗೆ ತೆರಳುವಾಗ ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಚಂದ್ರಶೇಖರ್ ಭುಜಕ್ಕೆ ಹೊಡೆದು ಕಾರಿನ ಗಾಜನ್ನು ಪುಡಿ ಮಾಡಿದ್ದಾರೆ.

Advertisement
Advertisement

ಚಂದ್ರಶೇಖರ್​ ಅವರು ಅತ್ತಿಬೆಲೆಯ ಪಟಾಕಿ ಅಂಗಡಿಯಿಂದ ತಮಿಳುನಾಡಿನ ಕಡೆಗೆ ಹೋಗುವ ಸಂದರ್ಭ ಈ ಘಟನೆ ನಡೆದಿದೆ.  ಚಂದ್ರಶೇಖರ್​ ಅವರ ಮೊಬೈಲ್ ಹಾಗು ಕಾರಿನ ಕೀ ಕಿತ್ತುಕೊಂಡು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಅತ್ತಿಬೆಲೆ ಇನ್ಸ್ಪೆಕ್ಟರ್ ಕೆ ವಿಶ್ವನಾಥ್ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 21-05-2025 | ಸಾಮಾನ್ಯ ಮಳೆ ಮುಂದುವರಿಕೆ | ಮೇ.23 ರಿಂದ ಮತ್ತೆ ಉತ್ತಮ ಮಳೆ | ವಾಯುಭಾರ ಕುಸಿತದ ಪರಿಣಾಮ ಏನಾಗಬಹುದು ?
May 21, 2025
12:46 PM
by: ಸಾಯಿಶೇಖರ್ ಕರಿಕಳ
2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್
May 21, 2025
11:18 AM
by: The Rural Mirror ಸುದ್ದಿಜಾಲ
ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ
May 21, 2025
11:11 AM
by: The Rural Mirror ಸುದ್ದಿಜಾಲ
ಗದಗದಲ್ಲಿ  ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿ ಬೆಂಬಲ ಬೆಲೆ ನಿಗದಿ
May 21, 2025
11:07 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group