ಪಟಾಕಿ ವ್ಯಾಪಾರಿ ಕಾರನ್ನು ಅಡ್ಡಗಟ್ಟಿ ಹಣ ದೋಚಿ ದುಷ್ಕರ್ಮಿಗಳು ಪರಾರಿ | ಬೆಂಗಳೂರು ಬಳಿ ಘಟನೆ |

October 25, 2022
3:24 PM

ಪಟಾಕಿ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 20 ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾದ ಘಟನೆ ಬೆಂಗಳೂರಿನ ಅತ್ತಿಬೆಲೆ ಟೋಲ್ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಪಟಾಕಿ ವ್ಯಾಪಾರಿ ಚಂದ್ರಶೇಖರ್ ರೆಡ್ಡಿ ಎಂಬವರು ತಮ್ಮ  ವಾಹನದಲ್ಲಿ 20 ಲಕ್ಷ ರೂಪಾಯಿ ಹಣದೊಂದಿಗೆ ತೆರಳುವಾಗ ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಚಂದ್ರಶೇಖರ್ ಭುಜಕ್ಕೆ ಹೊಡೆದು ಕಾರಿನ ಗಾಜನ್ನು ಪುಡಿ ಮಾಡಿದ್ದಾರೆ.

ಚಂದ್ರಶೇಖರ್​ ಅವರು ಅತ್ತಿಬೆಲೆಯ ಪಟಾಕಿ ಅಂಗಡಿಯಿಂದ ತಮಿಳುನಾಡಿನ ಕಡೆಗೆ ಹೋಗುವ ಸಂದರ್ಭ ಈ ಘಟನೆ ನಡೆದಿದೆ.  ಚಂದ್ರಶೇಖರ್​ ಅವರ ಮೊಬೈಲ್ ಹಾಗು ಕಾರಿನ ಕೀ ಕಿತ್ತುಕೊಂಡು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಅತ್ತಿಬೆಲೆ ಇನ್ಸ್ಪೆಕ್ಟರ್ ಕೆ ವಿಶ್ವನಾಥ್ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror