ಪಟಾಕಿ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 20 ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾದ ಘಟನೆ ಬೆಂಗಳೂರಿನ ಅತ್ತಿಬೆಲೆ ಟೋಲ್ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಪಟಾಕಿ ವ್ಯಾಪಾರಿ ಚಂದ್ರಶೇಖರ್ ರೆಡ್ಡಿ ಎಂಬವರು ತಮ್ಮ ವಾಹನದಲ್ಲಿ 20 ಲಕ್ಷ ರೂಪಾಯಿ ಹಣದೊಂದಿಗೆ ತೆರಳುವಾಗ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಚಂದ್ರಶೇಖರ್ ಭುಜಕ್ಕೆ ಹೊಡೆದು ಕಾರಿನ ಗಾಜನ್ನು ಪುಡಿ ಮಾಡಿದ್ದಾರೆ.
ಚಂದ್ರಶೇಖರ್ ಅವರು ಅತ್ತಿಬೆಲೆಯ ಪಟಾಕಿ ಅಂಗಡಿಯಿಂದ ತಮಿಳುನಾಡಿನ ಕಡೆಗೆ ಹೋಗುವ ಸಂದರ್ಭ ಈ ಘಟನೆ ನಡೆದಿದೆ. ಚಂದ್ರಶೇಖರ್ ಅವರ ಮೊಬೈಲ್ ಹಾಗು ಕಾರಿನ ಕೀ ಕಿತ್ತುಕೊಂಡು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಅತ್ತಿಬೆಲೆ ಇನ್ಸ್ಪೆಕ್ಟರ್ ಕೆ ವಿಶ್ವನಾಥ್ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…