ಪಟಾಕಿ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 20 ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾದ ಘಟನೆ ಬೆಂಗಳೂರಿನ ಅತ್ತಿಬೆಲೆ ಟೋಲ್ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಪಟಾಕಿ ವ್ಯಾಪಾರಿ ಚಂದ್ರಶೇಖರ್ ರೆಡ್ಡಿ ಎಂಬವರು ತಮ್ಮ ವಾಹನದಲ್ಲಿ 20 ಲಕ್ಷ ರೂಪಾಯಿ ಹಣದೊಂದಿಗೆ ತೆರಳುವಾಗ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಚಂದ್ರಶೇಖರ್ ಭುಜಕ್ಕೆ ಹೊಡೆದು ಕಾರಿನ ಗಾಜನ್ನು ಪುಡಿ ಮಾಡಿದ್ದಾರೆ.
ಚಂದ್ರಶೇಖರ್ ಅವರು ಅತ್ತಿಬೆಲೆಯ ಪಟಾಕಿ ಅಂಗಡಿಯಿಂದ ತಮಿಳುನಾಡಿನ ಕಡೆಗೆ ಹೋಗುವ ಸಂದರ್ಭ ಈ ಘಟನೆ ನಡೆದಿದೆ. ಚಂದ್ರಶೇಖರ್ ಅವರ ಮೊಬೈಲ್ ಹಾಗು ಕಾರಿನ ಕೀ ಕಿತ್ತುಕೊಂಡು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಅತ್ತಿಬೆಲೆ ಇನ್ಸ್ಪೆಕ್ಟರ್ ಕೆ ವಿಶ್ವನಾಥ್ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…