ಪಟಾಕಿ ಗಡಿಬಿಡಿ | ಪ್ರತ್ಯೇಕ ಘಟನೆಯಲ್ಲಿ 12 ಮಂದಿಗೆ ಗಾಯ | ಹೊತ್ತಿ ಉರಿದ ಅಂಗಡಿ |

October 25, 2022
4:34 PM

ಪ್ರತ್ಯೇಕ ಘಟನೆಗಳಲ್ಲಿ ಪಟಾಕಿ ಕಾರಣದಿಂದ 12 ಮಂದಿ ಗಾಯಗೊಂಡಿದ್ದಾರೆ. 7 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಪಟಾಕಿ ಸಿಡಿತದಿಂದ ಪೆಟ್ರೋಲ್‌ ಕ್ಯಾನ್‌ ಗೆ ಬೆಂಕಿ ಹಿಡಿದು ಅಂಗಡಿ ಭಸ್ಮವಾದ ಘಟನೆ ನಡೆದಿದೆ. 

Advertisement
Advertisement
Advertisement
Advertisement

ಬೆಂಗಳೂರು ನಗರದಲ್ಲಿ ಪಟಾಕಿ ಅವಘಡಗಳು ತಕ್ಷಣಕ್ಕೆ ವರದಿಯಾಗಿದೆ. ಉಳಿದ ಜಿಲ್ಲೆಗಳ ಪಟಾಕಿ ಅವಘಡಗಳು ಇನ್ನಷ್ಟೆ ಬೆಳಕಿಗೆ ಬರಬೇಕಿದೆ. ಸದ್ಯದ ಮಾಹಿತಿ ಪ್ರಕಾರ ಚಾಮರಾಜಪೇಟೆ ಮತ್ತು ಮೈಸೂರು ರಸ್ತೆಯಲ್ಲಿ ತಲಾ ಇಬ್ಬರು ಗಾಯಗೊಂಡಿದ್ದಾರೆ. ಚಾಮರಾಜಪೇಟೆಯ‌ 10 ವರ್ಷದ ಬಾಲಕ ಆಜಾದ್, 50 ವರ್ಷದ ರಮೇಶ್, ಮೈಸೂರು ರಸ್ತೆಯ 19 ವರ್ಷದ ಜಯಸೂರ್ಯ, 4 ವರ್ಷದ ಸುರಭಿ, ಸರ್ಜಾಪುರದ ಸಂಗೀತ ವರ್ಮಾ 49 ವರ್ಷ, ಅವೆನ್ಯೂ ರಸ್ತೆಯ ಹಬೀಬುಲ್ಲ 22 ವರ್ಷ, ಅನ್ನಪೂರ್ಣೇಶ್ವರಿ ನಗರದ 39 ವರ್ಷದ ಮಮತಾ ಅವರಿಗೆ ಪಟಾಕಿ ಸಿಡಿತದಿಂದ ಗಾಯಗಳಾಗಿವೆ ಎಂದು ವರದಿಯಾಗಿದೆ.

Advertisement

ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಪಾಳ್ಯಕೆರೆ ಗ್ರಾಮದಲ್ಲಿ ಪಟಾಕಿ ಸಿಡಿಯುವ ವೇಳೆ ಅಂಗಡಿಯಲ್ಲಿದ್ದ ಪೆಟ್ರೋಲ್‌ ಕ್ಯಾನ್‌ ಗೆ ಬೆಂಕಿ ತಗುಲಿ ಅಂಗಡಿ ಹೊತ್ತಿ ಉರಿದ ಘಟನೆ ನಡೆದಿದೆ. ಅವಘಡದಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror