ಪ್ರತ್ಯೇಕ ಘಟನೆಗಳಲ್ಲಿ ಪಟಾಕಿ ಕಾರಣದಿಂದ 12 ಮಂದಿ ಗಾಯಗೊಂಡಿದ್ದಾರೆ. 7 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಪಟಾಕಿ ಸಿಡಿತದಿಂದ ಪೆಟ್ರೋಲ್ ಕ್ಯಾನ್ ಗೆ ಬೆಂಕಿ ಹಿಡಿದು ಅಂಗಡಿ ಭಸ್ಮವಾದ ಘಟನೆ ನಡೆದಿದೆ.
ಬೆಂಗಳೂರು ನಗರದಲ್ಲಿ ಪಟಾಕಿ ಅವಘಡಗಳು ತಕ್ಷಣಕ್ಕೆ ವರದಿಯಾಗಿದೆ. ಉಳಿದ ಜಿಲ್ಲೆಗಳ ಪಟಾಕಿ ಅವಘಡಗಳು ಇನ್ನಷ್ಟೆ ಬೆಳಕಿಗೆ ಬರಬೇಕಿದೆ. ಸದ್ಯದ ಮಾಹಿತಿ ಪ್ರಕಾರ ಚಾಮರಾಜಪೇಟೆ ಮತ್ತು ಮೈಸೂರು ರಸ್ತೆಯಲ್ಲಿ ತಲಾ ಇಬ್ಬರು ಗಾಯಗೊಂಡಿದ್ದಾರೆ. ಚಾಮರಾಜಪೇಟೆಯ 10 ವರ್ಷದ ಬಾಲಕ ಆಜಾದ್, 50 ವರ್ಷದ ರಮೇಶ್, ಮೈಸೂರು ರಸ್ತೆಯ 19 ವರ್ಷದ ಜಯಸೂರ್ಯ, 4 ವರ್ಷದ ಸುರಭಿ, ಸರ್ಜಾಪುರದ ಸಂಗೀತ ವರ್ಮಾ 49 ವರ್ಷ, ಅವೆನ್ಯೂ ರಸ್ತೆಯ ಹಬೀಬುಲ್ಲ 22 ವರ್ಷ, ಅನ್ನಪೂರ್ಣೇಶ್ವರಿ ನಗರದ 39 ವರ್ಷದ ಮಮತಾ ಅವರಿಗೆ ಪಟಾಕಿ ಸಿಡಿತದಿಂದ ಗಾಯಗಳಾಗಿವೆ ಎಂದು ವರದಿಯಾಗಿದೆ.
ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಪಾಳ್ಯಕೆರೆ ಗ್ರಾಮದಲ್ಲಿ ಪಟಾಕಿ ಸಿಡಿಯುವ ವೇಳೆ ಅಂಗಡಿಯಲ್ಲಿದ್ದ ಪೆಟ್ರೋಲ್ ಕ್ಯಾನ್ ಗೆ ಬೆಂಕಿ ತಗುಲಿ ಅಂಗಡಿ ಹೊತ್ತಿ ಉರಿದ ಘಟನೆ ನಡೆದಿದೆ. ಅವಘಡದಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ…
ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
2025-26 ನೇ ಸಾಲಿನ ಅಗ್ನಿವೀರರ ನೇಮಕಾತಿಗಾಗಿ ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು…
ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ…
2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್…