ಪ್ರತ್ಯೇಕ ಘಟನೆಗಳಲ್ಲಿ ಪಟಾಕಿ ಕಾರಣದಿಂದ 12 ಮಂದಿ ಗಾಯಗೊಂಡಿದ್ದಾರೆ. 7 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಪಟಾಕಿ ಸಿಡಿತದಿಂದ ಪೆಟ್ರೋಲ್ ಕ್ಯಾನ್ ಗೆ ಬೆಂಕಿ ಹಿಡಿದು ಅಂಗಡಿ ಭಸ್ಮವಾದ ಘಟನೆ ನಡೆದಿದೆ.
ಬೆಂಗಳೂರು ನಗರದಲ್ಲಿ ಪಟಾಕಿ ಅವಘಡಗಳು ತಕ್ಷಣಕ್ಕೆ ವರದಿಯಾಗಿದೆ. ಉಳಿದ ಜಿಲ್ಲೆಗಳ ಪಟಾಕಿ ಅವಘಡಗಳು ಇನ್ನಷ್ಟೆ ಬೆಳಕಿಗೆ ಬರಬೇಕಿದೆ. ಸದ್ಯದ ಮಾಹಿತಿ ಪ್ರಕಾರ ಚಾಮರಾಜಪೇಟೆ ಮತ್ತು ಮೈಸೂರು ರಸ್ತೆಯಲ್ಲಿ ತಲಾ ಇಬ್ಬರು ಗಾಯಗೊಂಡಿದ್ದಾರೆ. ಚಾಮರಾಜಪೇಟೆಯ 10 ವರ್ಷದ ಬಾಲಕ ಆಜಾದ್, 50 ವರ್ಷದ ರಮೇಶ್, ಮೈಸೂರು ರಸ್ತೆಯ 19 ವರ್ಷದ ಜಯಸೂರ್ಯ, 4 ವರ್ಷದ ಸುರಭಿ, ಸರ್ಜಾಪುರದ ಸಂಗೀತ ವರ್ಮಾ 49 ವರ್ಷ, ಅವೆನ್ಯೂ ರಸ್ತೆಯ ಹಬೀಬುಲ್ಲ 22 ವರ್ಷ, ಅನ್ನಪೂರ್ಣೇಶ್ವರಿ ನಗರದ 39 ವರ್ಷದ ಮಮತಾ ಅವರಿಗೆ ಪಟಾಕಿ ಸಿಡಿತದಿಂದ ಗಾಯಗಳಾಗಿವೆ ಎಂದು ವರದಿಯಾಗಿದೆ.
ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಪಾಳ್ಯಕೆರೆ ಗ್ರಾಮದಲ್ಲಿ ಪಟಾಕಿ ಸಿಡಿಯುವ ವೇಳೆ ಅಂಗಡಿಯಲ್ಲಿದ್ದ ಪೆಟ್ರೋಲ್ ಕ್ಯಾನ್ ಗೆ ಬೆಂಕಿ ತಗುಲಿ ಅಂಗಡಿ ಹೊತ್ತಿ ಉರಿದ ಘಟನೆ ನಡೆದಿದೆ. ಅವಘಡದಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…