ಪ್ರತ್ಯೇಕ ಘಟನೆಗಳಲ್ಲಿ ಪಟಾಕಿ ಕಾರಣದಿಂದ 12 ಮಂದಿ ಗಾಯಗೊಂಡಿದ್ದಾರೆ. 7 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಪಟಾಕಿ ಸಿಡಿತದಿಂದ ಪೆಟ್ರೋಲ್ ಕ್ಯಾನ್ ಗೆ ಬೆಂಕಿ ಹಿಡಿದು ಅಂಗಡಿ ಭಸ್ಮವಾದ ಘಟನೆ ನಡೆದಿದೆ.
ಬೆಂಗಳೂರು ನಗರದಲ್ಲಿ ಪಟಾಕಿ ಅವಘಡಗಳು ತಕ್ಷಣಕ್ಕೆ ವರದಿಯಾಗಿದೆ. ಉಳಿದ ಜಿಲ್ಲೆಗಳ ಪಟಾಕಿ ಅವಘಡಗಳು ಇನ್ನಷ್ಟೆ ಬೆಳಕಿಗೆ ಬರಬೇಕಿದೆ. ಸದ್ಯದ ಮಾಹಿತಿ ಪ್ರಕಾರ ಚಾಮರಾಜಪೇಟೆ ಮತ್ತು ಮೈಸೂರು ರಸ್ತೆಯಲ್ಲಿ ತಲಾ ಇಬ್ಬರು ಗಾಯಗೊಂಡಿದ್ದಾರೆ. ಚಾಮರಾಜಪೇಟೆಯ 10 ವರ್ಷದ ಬಾಲಕ ಆಜಾದ್, 50 ವರ್ಷದ ರಮೇಶ್, ಮೈಸೂರು ರಸ್ತೆಯ 19 ವರ್ಷದ ಜಯಸೂರ್ಯ, 4 ವರ್ಷದ ಸುರಭಿ, ಸರ್ಜಾಪುರದ ಸಂಗೀತ ವರ್ಮಾ 49 ವರ್ಷ, ಅವೆನ್ಯೂ ರಸ್ತೆಯ ಹಬೀಬುಲ್ಲ 22 ವರ್ಷ, ಅನ್ನಪೂರ್ಣೇಶ್ವರಿ ನಗರದ 39 ವರ್ಷದ ಮಮತಾ ಅವರಿಗೆ ಪಟಾಕಿ ಸಿಡಿತದಿಂದ ಗಾಯಗಳಾಗಿವೆ ಎಂದು ವರದಿಯಾಗಿದೆ.
ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಪಾಳ್ಯಕೆರೆ ಗ್ರಾಮದಲ್ಲಿ ಪಟಾಕಿ ಸಿಡಿಯುವ ವೇಳೆ ಅಂಗಡಿಯಲ್ಲಿದ್ದ ಪೆಟ್ರೋಲ್ ಕ್ಯಾನ್ ಗೆ ಬೆಂಕಿ ತಗುಲಿ ಅಂಗಡಿ ಹೊತ್ತಿ ಉರಿದ ಘಟನೆ ನಡೆದಿದೆ. ಅವಘಡದಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…