ಪ್ರತ್ಯೇಕ ಘಟನೆಗಳಲ್ಲಿ ಪಟಾಕಿ ಕಾರಣದಿಂದ 12 ಮಂದಿ ಗಾಯಗೊಂಡಿದ್ದಾರೆ. 7 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಪಟಾಕಿ ಸಿಡಿತದಿಂದ ಪೆಟ್ರೋಲ್ ಕ್ಯಾನ್ ಗೆ ಬೆಂಕಿ ಹಿಡಿದು ಅಂಗಡಿ ಭಸ್ಮವಾದ ಘಟನೆ ನಡೆದಿದೆ.
ಬೆಂಗಳೂರು ನಗರದಲ್ಲಿ ಪಟಾಕಿ ಅವಘಡಗಳು ತಕ್ಷಣಕ್ಕೆ ವರದಿಯಾಗಿದೆ. ಉಳಿದ ಜಿಲ್ಲೆಗಳ ಪಟಾಕಿ ಅವಘಡಗಳು ಇನ್ನಷ್ಟೆ ಬೆಳಕಿಗೆ ಬರಬೇಕಿದೆ. ಸದ್ಯದ ಮಾಹಿತಿ ಪ್ರಕಾರ ಚಾಮರಾಜಪೇಟೆ ಮತ್ತು ಮೈಸೂರು ರಸ್ತೆಯಲ್ಲಿ ತಲಾ ಇಬ್ಬರು ಗಾಯಗೊಂಡಿದ್ದಾರೆ. ಚಾಮರಾಜಪೇಟೆಯ 10 ವರ್ಷದ ಬಾಲಕ ಆಜಾದ್, 50 ವರ್ಷದ ರಮೇಶ್, ಮೈಸೂರು ರಸ್ತೆಯ 19 ವರ್ಷದ ಜಯಸೂರ್ಯ, 4 ವರ್ಷದ ಸುರಭಿ, ಸರ್ಜಾಪುರದ ಸಂಗೀತ ವರ್ಮಾ 49 ವರ್ಷ, ಅವೆನ್ಯೂ ರಸ್ತೆಯ ಹಬೀಬುಲ್ಲ 22 ವರ್ಷ, ಅನ್ನಪೂರ್ಣೇಶ್ವರಿ ನಗರದ 39 ವರ್ಷದ ಮಮತಾ ಅವರಿಗೆ ಪಟಾಕಿ ಸಿಡಿತದಿಂದ ಗಾಯಗಳಾಗಿವೆ ಎಂದು ವರದಿಯಾಗಿದೆ.
ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಪಾಳ್ಯಕೆರೆ ಗ್ರಾಮದಲ್ಲಿ ಪಟಾಕಿ ಸಿಡಿಯುವ ವೇಳೆ ಅಂಗಡಿಯಲ್ಲಿದ್ದ ಪೆಟ್ರೋಲ್ ಕ್ಯಾನ್ ಗೆ ಬೆಂಕಿ ತಗುಲಿ ಅಂಗಡಿ ಹೊತ್ತಿ ಉರಿದ ಘಟನೆ ನಡೆದಿದೆ. ಅವಘಡದಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…