ಪ್ರತ್ಯೇಕ ಘಟನೆಗಳಲ್ಲಿ ಪಟಾಕಿ ಕಾರಣದಿಂದ 12 ಮಂದಿ ಗಾಯಗೊಂಡಿದ್ದಾರೆ. 7 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಪಟಾಕಿ ಸಿಡಿತದಿಂದ ಪೆಟ್ರೋಲ್ ಕ್ಯಾನ್ ಗೆ ಬೆಂಕಿ ಹಿಡಿದು ಅಂಗಡಿ ಭಸ್ಮವಾದ ಘಟನೆ ನಡೆದಿದೆ.
ಬೆಂಗಳೂರು ನಗರದಲ್ಲಿ ಪಟಾಕಿ ಅವಘಡಗಳು ತಕ್ಷಣಕ್ಕೆ ವರದಿಯಾಗಿದೆ. ಉಳಿದ ಜಿಲ್ಲೆಗಳ ಪಟಾಕಿ ಅವಘಡಗಳು ಇನ್ನಷ್ಟೆ ಬೆಳಕಿಗೆ ಬರಬೇಕಿದೆ. ಸದ್ಯದ ಮಾಹಿತಿ ಪ್ರಕಾರ ಚಾಮರಾಜಪೇಟೆ ಮತ್ತು ಮೈಸೂರು ರಸ್ತೆಯಲ್ಲಿ ತಲಾ ಇಬ್ಬರು ಗಾಯಗೊಂಡಿದ್ದಾರೆ. ಚಾಮರಾಜಪೇಟೆಯ 10 ವರ್ಷದ ಬಾಲಕ ಆಜಾದ್, 50 ವರ್ಷದ ರಮೇಶ್, ಮೈಸೂರು ರಸ್ತೆಯ 19 ವರ್ಷದ ಜಯಸೂರ್ಯ, 4 ವರ್ಷದ ಸುರಭಿ, ಸರ್ಜಾಪುರದ ಸಂಗೀತ ವರ್ಮಾ 49 ವರ್ಷ, ಅವೆನ್ಯೂ ರಸ್ತೆಯ ಹಬೀಬುಲ್ಲ 22 ವರ್ಷ, ಅನ್ನಪೂರ್ಣೇಶ್ವರಿ ನಗರದ 39 ವರ್ಷದ ಮಮತಾ ಅವರಿಗೆ ಪಟಾಕಿ ಸಿಡಿತದಿಂದ ಗಾಯಗಳಾಗಿವೆ ಎಂದು ವರದಿಯಾಗಿದೆ.
ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಪಾಳ್ಯಕೆರೆ ಗ್ರಾಮದಲ್ಲಿ ಪಟಾಕಿ ಸಿಡಿಯುವ ವೇಳೆ ಅಂಗಡಿಯಲ್ಲಿದ್ದ ಪೆಟ್ರೋಲ್ ಕ್ಯಾನ್ ಗೆ ಬೆಂಕಿ ತಗುಲಿ ಅಂಗಡಿ ಹೊತ್ತಿ ಉರಿದ ಘಟನೆ ನಡೆದಿದೆ. ಅವಘಡದಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…