ಸುದ್ದಿಗಳು

ಪ್ರಥಮ ಚಿಕಿತ್ಸೆಯ ಸಂದರ್ಭದಲ್ಲಿ ಮೊಬೈಲ್ ಬಳಸಬಾರದು – ರೋ.ಕ್ಸೇವಿಯರ್ ಡಿಸೋಜಾ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರಥಮ ಚಿಕಿತ್ಸೆ ಮಾಡುವ ಸಂದರ್ಭದಲ್ಲಿ ನಾವು ಮೊಬೈಲ್ ಬಳಸಬಾರದು. ಅಲ್ಲದೇ ಅಪಘಾತಗೊಂಡಿರುವ ವ್ಯಕ್ತಿಯ ಜೀವ ಉಳಿಸುವ ಕಾರ್ಯವಾಗಬೇಕೆ ವಿನಃ ಅನ್ಯ ಕಾರ್ಯಗಳ ಬಗೆಗೆ ಆಲೋಚನೆಗಳು ಇರಬಾರದು ಎಂದು ಪುತ್ತೂರಿನ ರೋಟರಿ ಕ್ಲಬ್ ನ ಅಧ್ಯಕ್ಷ ರೋ.ಕ್ಸೇವಿಯರ್ ಡಿಸೋಜಾ ಹೇಳಿದರು.

Advertisement
Advertisement

ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದ ಪ್ರಥಮ ಚಿಕಿತ್ಸಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ಮನುಷ್ಯ ಎಷ್ಟೇ ಮುಂದುವರಿದರೂ ಕೂಡಾ ಎಂದೆಂದಿಗೂ ಮಾನವೀಯತೆಯನ್ನು ಮರೆಯಬಾರದು. ಯಾರಿಗಾದರೂ ಪ್ರಥಮ ಚಿಕಿತ್ಸೆಯ ಅವಶ್ಯಕತೆ ಇದ್ದರೆ ಆ ಕೂಡಲೇ ತಕ್ಷಣ ಕಾರ್ಯ ಪ್ರವೃತ್ತರಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ಪುತ್ತೂರಿನ ರೋಟರಿ ಬ್ಲಡ್ ಬ್ಯಾಂಕಿನ ಡಾ.ರಾಮಚಂದ್ರ ಭಟ್ ಮಾತನಾಡಿ ಪ್ರಥಮ ಚಿಕಿತ್ಸೆ ಎಂದರೆ ಗಾಯ ಅಥವಾ ಅವಘಡಗಳಾದಾಗ ನೀಡುವ ಆರಂಭಿಕ ಆರೈಕೆ, ಹಾಗಾಗಿ ನಾವೆಲ್ಲರೂ ಪ್ರಥಮ ಚಿಕಿತ್ಸೆಯ ಬಗ್ಗೆ ನಮ್ಮೊಳಗೆ ಅರಿವನ್ನು ಮೂಡಿಸಿಕೊಳ್ಳಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವಿ.ಜಿ.ಭಟ್ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೆಶಕ ವಾಮನ ಪೈ ಹಾಗೂ ಪುತ್ತೂರು ರೋಟರಿ ಕ್ಲಬ್ ನ ಕಾರ್ಯದರ್ಶಿ ಪ್ರೊ.ದತ್ತಾತ್ರೇಯ ಉಪಸ್ಥಿತರಿದ್ದರು. ಜೊತೆಗೆ ಕಾಲೇಜಿನ ಎನ್‍ಸಿಸಿ, ಎನ್‍ಎಸ್‍ಎಸ್, ರೋವರ್ ರೇಂಜರ್ಸ್ ಹಾಗೂ ರೆಡ್‍ಕ್ರಾಸ್ ನ ವಿದ್ಯಾರ್ಥಿಗಳು ಭಾಗವಹಿಸಿದರು. ಕಾಲೇಜಿನ ಎನ್‍ಎಸ್‍ಎಸ್‍ ಅಧಿಕಾರಿ ಶ್ರೀನಾಥ್ ಕಾರ್ಯಕ್ರಮವನ್ನು ನಿರ್ವಹಿಸಿ ಎನ್‍ಸಿಸಿ ಅಧಿಕಾರಿ ಲೆ.ಅತುಲ್ ಶೆಣೈ ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

25 minutes ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ…

32 minutes ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ

ಕೊರೋನಾ ಸಂಬಂಧಿಸಿದ ವದಂತಿಗಳನ್ನು ಜನತೆ ನಂಬಬಾರದು. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ಸುದ್ದಿಗಳು…

2 hours ago

ಮನ ಗೆಲ್ಲುವ ಮಾವಿನ ಹಣ್ಣುಗಳು

ಮಾವಿನ ಹಣ್ಣಿನ ಕಾಲದಲ್ಲಿ ನಿತ್ಯ ಏನಾದರೊಂದು ಬಗೆ ಮಾಡಿ ಉಣಬಡಿಸದಿದ್ದರೆ ಮನೆಯಾಕೆಗೆ ಖಂಡಿತಾ…

2 hours ago

ಕೃಷಿ-ಮಾರುಕಟ್ಟೆ | ಚಾಲಿ ಅಡಿಕೆಯ ಉಪಯೋಗದ ವಿಧಾನಗಳು

ಅಡಿಕೆಯನ್ನು ಮುಖ್ಯವಾಗಿ ಬೀಡಾದ ತಯಾರಿಯಲ್ಲಿ ಒಂದು ಮೂಲ ಉತ್ಪನ್ನ ಆಗಿ ಬಳಸಲಾಗುತ್ತಿದೆ.ಇದನ್ನು ವಿವಿಧ…

2 hours ago

ಹವಾಮಾನ ವರದಿ | 03-06-2025 | ಜೂನ್ 5 ರಿಂದ ಹೆಚ್ಚಿನ ಅವಧಿ ಬಿಸಿಲು ಇರಬಹುದು |

ಜೂನ್ 11ರಿಂದ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಂಡು ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ…

2 hours ago