Advertisement
ಸುದ್ದಿಗಳು

ಕೃಷಿ ಸಖಿಯರ ಪ್ರಥಮ ಪ್ರಗತಿ ಪರಿಶೀಲನಾ ಸಭೆ | ವಿವಿಧ ತರಕಾರಿ ಬೀಜಗಳ ವಿತರಣೆ | ತರಕಾರಿ ಬೆಳೆಸುವ ವಿಧಾನಗಳ ಬಗ್ಗೆ ಮಾಹಿತಿ |

Share

ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು, ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಕೃಷಿ ವಿಜ್ಞಾನ ಕೇಂದ್ರ ಮಂಗಳೂರು, ICAR-IIHR ಬೆಂಗಳೂರು, ಕೃಷಿ ಇಲಾಖೆ ಸುಳ್ಯ, ತೋಟಗಾರಿಕಾ ಇಲಾಖೆ ಸುಳ್ಯ ಇವರ ಆಶ್ರಯದಲ್ಲಿ ಕೃಷಿ ಸಖಿ, ಕೃಷಿ ಉದ್ಯೋಗ ಸಖಿ, FLCRP, BC ಸಖಿಗಳಿಗೆ ಪ್ರಗತಿ ಪರಿಶೀಲನಾ ಸಭೆ ಮತ್ತು SC TSP ಯೋಜನೆ ಅಡಿಯಲ್ಲಿ ರೈತರಿಗೆ ತರಕಾರಿ ಬೀಜ ವಿತರಣೆ ಕಾರ್ಯಕ್ರಮ ನಡೆಯಿತು.……..ಮುಂದೆ ಓದಿ…..

Advertisement
Advertisement

ಕಾರ್ಯಕ್ರಮವನ್ನು ICAR-IIHR ಮುಖ್ಯ ವಿಜ್ಞಾನಿ ಡಾ. ಸೆಂತಿಲ್ ಕುಮಾರ್ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ನರೇಗಾ  ಸಹಾಯಕ ನಿರ್ದೇಶಕ ರವಿಚಂದ್ರ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಡಾ. ಟಿ ಜೆ ರಮೇಶ್, ಮುಖ್ಯಸ್ಥರು ಹಿರಿಯ ವಿಜ್ಞಾನಿ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು,  ವಿಜೇತ್ ಹಿರಿಯ ನಿರ್ದೇಶಕರು ತೋಟಗಾರಿಕಾ ಇಲಾಖೆ ಸುಳ್ಯ, ವಿನೀತ್ ಮೋನಿಶ್ ಕೃಷಿ ಜೀವನೋಪಾಯ ಜಿಲ್ಲಾ ಪಂಚಾಯತ್ ಮಂಗಳೂರು,  ಯಶೋಧ ಬಾಳೆಗುಡ್ಡೆ, ಅಧ್ಯಕ್ಷರು ಪಯಸ್ವಿನಿ ತಾಲೂಕು ಮಟ್ಟದ ಒಕ್ಕೂಟ ಸುಳ್ಯ,  ಶ್ವೇತ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಎನ್ ಆರ್ ಎಲ್ ಎಂ ಸುಳ್ಯ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೃಷಿ ಸಖಿ, ಉದ್ಯೋಗ FLCRP, BC ಸಖಿಗಳಿಗೆ ಪ್ರಥಮ ಪ್ರಗತಿ ಪರಿಶೀಲನ ಸಭೆ ಆಯೋಜಿಸಿದ್ದು ಇದರಲ್ಲಿ ಕೃಷಿ ಸಖಿ ಪ್ರಗತಿ ಬಗ್ಗೆ ಜಿಲ್ಲಾ ವ್ಯವಸ್ಥಾಪಕರು ಕೃಷಿ ಜೀವನೋಪಾಯ ಜಿಲ್ಲಾ ಪಂಚಾಯತ್ ಮಂಗಳೂರು ಇವರು ಕೃಷಿ ಸಖಿಯರ ಕಾರ್ಯವೈಖರಿ, ಕೃಷಿ ಸಖಿ ಜವಾಬ್ದಾರಿ ಮತ್ತು ಪಾತ್ರಗಳು, ನೈಸರ್ಗಿಕ ಕೃಷಿ, ಪೌಷ್ಟಿಕ ಕೈತೋಟ, ನರೇಗಾ ಯೋಜನೆಯ ಸಹಭಾಗಿತ್ವ ಕೆಲಸ, ಅಜೀವಿಕ ರಿಜಿಸ್ಟರ್, IFC, PMFME ಸಾಲ, MIS ಇತ್ಯಾದಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸುವುದರ ಜೊತೆಗೆ ಮುಂದಿನ ಪ್ರಗತಿ ಪರಿಶೀಲನೆ ಸಭೆಗೆ ಯಾವ ರೀತಿಯಲ್ಲಿ ಸಿದ್ಧತೆಗಳನ್ನು ನಡೆಸಿಕೊಂಡಿರಬೇಕು ಎಂಬುದರ ಬಗ್ಗೆ ವಿಸ್ಕೃತ ಮಾಹಿತಿಯನ್ನು ನೀಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅರ್ಹ ರೈತ ಫಲಾನುಭವಿಗಳಿಗೆ ಅಲಸಂಡೆ ಬೀಜ, ಈರುಳ್ಳಿ, ಟೊಮೇಟೊ, ಮೆಣಸಿನ ಬೀಜ, ಬದನೆಕಾಯಿ, ಹರಿವೆ, ತಿಂಗಳ ಅವರೇ, ಚಪ್ಪರದ ಅವರೇ, ಬೆಂಡೆಕಾಯಿ ಇತ್ಯಾದಿ ಬೀಜಗಳನ್ನು ಅತಿಥಿಗಳ ಮೂಲಕ ವಿತರಿಸಲಾಯಿತು. ಬೆಂಗಳೂರಿನ ವಿಜ್ಞಾನಿಗಳಾದ ಡಾಕ್ಟರ್ ಸೆಂಥಿಲ್ ಕುಮಾರ್ ಅವರು ತರಕಾರಿ ಬೀಜದ ಬಗ್ಗೆ ಯಾವುದೇ ಹಣ್ಣಿನ ಗಿಡ, ತೋಟಗಾರಿಕಾ ಬೆಳೆ ಬೆಳೆಸುವ ಮೊದಲು ಮಣ್ಣಿನ ಪರೀಕ್ಷೆ ಮಾಡಿಸಬೇಕು ಮತ್ತು ಇದರ ಮಾಹಿತಿಯನ್ನು ಸಖಿಯರು ನೀಡಬೇಕು ಎಂದು ತಿಳಿಸಿದರು. ಪಪ್ಪಾಯಿ, ಪುನರ್ಪುಳಿ ಹಣ್ಣಿಗೆ ಇರುವ ಮಹತ್ವದ ಬಗ್ಗೆ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಮಾಹಿತಿ ನೀಡಿದರು.

ಕೃಷಿ ವಿಜ್ಞಾನ ಕೇಂದ್ರ ಮಂಗಳೂರಿನ ಹಿರಿಯ ವಿಜ್ಞಾನಿಗಳಾದ  ಡಾ. ಟಿ.ಜೆ ರಮೇಶ್ ಇವರು ಸಂಜೀವಿನಿ ಒಕ್ಕೂಟಗಳ ಕೃಷಿ ಸಖಿಯರ ಮುಖಾಂತರ ಸುಳ್ಯ ತಾಲೂಕಿನ ಎಲ್ಲಾ ಗ್ರಾಮಗಳ ಕೃಷಿಕರಿಗೆ ಉತ್ತಮ ಮಾಹಿತಿ, ವಿವಿಧ ಇಲಾಖೆಗಳ ಯೋಜನೆಗಳ ಮಾಹಿತಿ ಹಾಗೂ ಕೃಷಿಗೆ ಸಂಬಂಧಿಸಿದ ವಿವಿಧ ಸೌಲಭ್ಯಗಳು ದೊರಕಲು ಸಾಧ್ಯವಾಗುತ್ತಿದೆ. ಕೃಷಿಕರ ಅಭಿವೃದ್ಧಿಗೆ ಸಹಕರಿಸುತ್ತಿರುವ  ಸಂಜೀವಿನಿ ಟಿಪಿಎಂ ಶ್ವೇತ ,ಜೀವನ್ ಪ್ರಕಾಶ  ಹಾಗೂ ಸಂಪಾಜೆ ಕೃಷಿ ಸಖಿ ಮೋಹಿನಿ ವಿಶ್ವನಾಥ್ ಹಾಗೂ ತಾಲ್ಲೂಕಿನ ಎಲ್ಲಾ ಕೃಷಿ ಸಖಿಯರ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪಂಜ ಗ್ರಾಮದ ಕೃಷಿ ಸಖಿ ವೇದಾವತಿಯವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶ್ವೇತ ಟಿಪಿಎಂ ಅತಿಥಿಗಳನ್ನು ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

2 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

2 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

3 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

3 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

3 hours ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

13 hours ago