#RuralMirror | ರಸ್ತೆ ಬದಿ ಬಿದ್ದಿದ್ದ ವೃದ್ಧ | ಮಾನವೀಯ ಕಾರ್ಯಕ್ಕೆ ಕಾಣಿಕೆ ನೀಡಿದ ವೃದ್ಧ |

August 21, 2023
6:20 PM
ರಸ್ತೆ ಬದಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಉಪಚರಿಸಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದ ಘಟನೆ ಗುತ್ತಿಗಾರಿನಲ್ಲಿ ನಡೆದಿದೆ. ಈ ಸಂದರ್ಭ ಮಾನವೀಯ ಸೇವೆಯಿಂದ ಚೇತರಿಕೆ ಕಂಡ ರೋಗಿಯೇ ನೆರವಾಗುವ ಮೂಲಕ ಮಾದರಿಯಾಗಿದ್ದಾರೆ.

ಮಾನವೀಯ ಸೇವೆಯೇ ಮರೆಯಾಗುತ್ತಿರುವ ಕಾಲ ಇದು. ಉಪಕರಿಸಿದರೆ, ಮರುಕ್ಷಣವೇ ಮರೆತು ಹೋಗುವ ಸಮಯ ಇದು.  ಅಂತಹದ್ದರಲ್ಲಿ ಗ್ರಾಮೀಣ ಭಾಗದಲ್ಲಿ ನಡೆಯುತ್ತಿರುವ ಸೇವಾ ಕಾರ್ಯ ಗುರುತಿಸಿಕೊಂಡಿದೆ. ಹೀಗಾಗಿ ಸೇವೆ ಮಾಡಿರುವ ಸಂಸ್ಥೆಯೇ ನೆರವಾದ ಘಟನೆಯೊಂದು ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಡೆದಿದೆ.

Advertisement
Advertisement

ಸುಳ್ಯ ತಾಲೂಕಿನ  ಗುತ್ತಿಗಾರು ಸಮೀಪದ ಹಾಲೆಮಜಲು ಎಂಬಲ್ಲಿ ಬೆಳಿಗ್ಗೆ  ವೃದ್ದ ರೊಬ್ಬರು ಆಕಸ್ಮಿಕವಾಗಿ ಬಿದ್ದಿದ್ದರು .ಆ ಸಂದರ್ಭ ಗಮನಿಸಿದ ವಿನ್ಯಾಸ್ ಕೊಚ್ಚಿ ಅವರು ಗುತ್ತಿಗಾರು ಪ್ರದೇಶದಲ್ಲಿ ಕಳೆದ ಕೆಲ ಸಮಯಗಳಿಂದ ಅಮರ ಟಾರಿಟೇಬಲ್‌ ಟ್ರಸ್ಟ್‌ ಮೂಲಕ ಸಾಮಾಜಿಕ ಕೆಲಸ ಮಾಡುತ್ತಿರುವ  ಆಂಬುಲೆನ್ಸ್ ಸೇವೆಗೆ ತಿಳಿಸಿದರು. ಸ್ಥಳೀಯರೆಲ್ಲರೂ ಜೊತೆಯಾಗಿ ತಕ್ಷಣವೇ ಅವರನ್ನು ಗುತ್ತಿಗಾರಿನ ಡಾ.ಅನಂತಕೃಷ್ಣ ಕಾಮತ್ ಅವರಲ್ಲಿ ಪ್ರಥಮ ಚಿಕಿತ್ಸೆ ನೀಡಿ ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿಸಿದರು. ನಂತರ ಸ್ವತಃ ಆಂಬುಲೆನ್ಸ್ ಮೂಲಕವೇ ಅವರ ಸಂಬಂಧಿಗಳ ಮನೆಯಾದ ದುಗಲಡ್ಕಕಕ್ಕೆ  ತಲುಪಿಸುವಲ್ಲಿ ಯಶಸ್ವಿಯಾದರು. ಈ ವೇಳೆ ಚೇತರೀಕೆಗೊಂಡ ಗಾಯಾಳು ಆಂಬುಲೆನ್ಸ್ ಸೇವೆಗೆ ಸಹಾಯಧನ ನೀಡಿ ಮಾದರಿಯಾದರು. ಸೇವೆಯನ್ನು ನೆನೆದು ಧನ್ಯವಾದ ಅರ್ಪಿಸಿದರು.

Advertisement

ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯ ಜಗದೀಶ್ ಬಾಕಿಲ, ಮಾಧವ್ ಎರ್ದಡ್ಕ, ರಾಜೇಶ್ ಉತ್ರಂಬೆ, ರಾಜೇಶ್ ಕುಕ್ಕುಜೆ, ಗಿರೀಶ್ ಕಾಯರಮೊಗೇರ್, ತೇಜಾವತಿ  ಸಹಕಾರ ನೀಡಿದ್ದರು. ಚಂದ್ರಶೇಖರ ಕಡೋಡಿ ಮತ್ತು ವಿನಯ್ ಮಾಡಬಾಕಿಲು ಆಸ್ಪತ್ರೆಗೆ ಮತ್ತು ಮನೆಗೆ ತಲುಪಿಸುವಲ್ಲಿ ನೆರವಾದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |
April 28, 2024
9:26 PM
by: ಪ್ರಬಂಧ ಅಂಬುತೀರ್ಥ
ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ
April 28, 2024
9:24 PM
by: The Rural Mirror ಸುದ್ದಿಜಾಲ
ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |
April 28, 2024
4:55 PM
by: The Rural Mirror ಸುದ್ದಿಜಾಲ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |
April 28, 2024
4:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror