Advertisement
MIRROR FOCUS

#RuralMirror | ರಸ್ತೆ ಬದಿ ಬಿದ್ದಿದ್ದ ವೃದ್ಧ | ಮಾನವೀಯ ಕಾರ್ಯಕ್ಕೆ ಕಾಣಿಕೆ ನೀಡಿದ ವೃದ್ಧ |

Share

ಮಾನವೀಯ ಸೇವೆಯೇ ಮರೆಯಾಗುತ್ತಿರುವ ಕಾಲ ಇದು. ಉಪಕರಿಸಿದರೆ, ಮರುಕ್ಷಣವೇ ಮರೆತು ಹೋಗುವ ಸಮಯ ಇದು.  ಅಂತಹದ್ದರಲ್ಲಿ ಗ್ರಾಮೀಣ ಭಾಗದಲ್ಲಿ ನಡೆಯುತ್ತಿರುವ ಸೇವಾ ಕಾರ್ಯ ಗುರುತಿಸಿಕೊಂಡಿದೆ. ಹೀಗಾಗಿ ಸೇವೆ ಮಾಡಿರುವ ಸಂಸ್ಥೆಯೇ ನೆರವಾದ ಘಟನೆಯೊಂದು ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಡೆದಿದೆ.

ಸುಳ್ಯ ತಾಲೂಕಿನ  ಗುತ್ತಿಗಾರು ಸಮೀಪದ ಹಾಲೆಮಜಲು ಎಂಬಲ್ಲಿ ಬೆಳಿಗ್ಗೆ  ವೃದ್ದ ರೊಬ್ಬರು ಆಕಸ್ಮಿಕವಾಗಿ ಬಿದ್ದಿದ್ದರು .ಆ ಸಂದರ್ಭ ಗಮನಿಸಿದ ವಿನ್ಯಾಸ್ ಕೊಚ್ಚಿ ಅವರು ಗುತ್ತಿಗಾರು ಪ್ರದೇಶದಲ್ಲಿ ಕಳೆದ ಕೆಲ ಸಮಯಗಳಿಂದ ಅಮರ ಟಾರಿಟೇಬಲ್‌ ಟ್ರಸ್ಟ್‌ ಮೂಲಕ ಸಾಮಾಜಿಕ ಕೆಲಸ ಮಾಡುತ್ತಿರುವ  ಆಂಬುಲೆನ್ಸ್ ಸೇವೆಗೆ ತಿಳಿಸಿದರು. ಸ್ಥಳೀಯರೆಲ್ಲರೂ ಜೊತೆಯಾಗಿ ತಕ್ಷಣವೇ ಅವರನ್ನು ಗುತ್ತಿಗಾರಿನ ಡಾ.ಅನಂತಕೃಷ್ಣ ಕಾಮತ್ ಅವರಲ್ಲಿ ಪ್ರಥಮ ಚಿಕಿತ್ಸೆ ನೀಡಿ ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿಸಿದರು. ನಂತರ ಸ್ವತಃ ಆಂಬುಲೆನ್ಸ್ ಮೂಲಕವೇ ಅವರ ಸಂಬಂಧಿಗಳ ಮನೆಯಾದ ದುಗಲಡ್ಕಕಕ್ಕೆ  ತಲುಪಿಸುವಲ್ಲಿ ಯಶಸ್ವಿಯಾದರು. ಈ ವೇಳೆ ಚೇತರೀಕೆಗೊಂಡ ಗಾಯಾಳು ಆಂಬುಲೆನ್ಸ್ ಸೇವೆಗೆ ಸಹಾಯಧನ ನೀಡಿ ಮಾದರಿಯಾದರು. ಸೇವೆಯನ್ನು ನೆನೆದು ಧನ್ಯವಾದ ಅರ್ಪಿಸಿದರು.

ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯ ಜಗದೀಶ್ ಬಾಕಿಲ, ಮಾಧವ್ ಎರ್ದಡ್ಕ, ರಾಜೇಶ್ ಉತ್ರಂಬೆ, ರಾಜೇಶ್ ಕುಕ್ಕುಜೆ, ಗಿರೀಶ್ ಕಾಯರಮೊಗೇರ್, ತೇಜಾವತಿ  ಸಹಕಾರ ನೀಡಿದ್ದರು. ಚಂದ್ರಶೇಖರ ಕಡೋಡಿ ಮತ್ತು ವಿನಯ್ ಮಾಡಬಾಕಿಲು ಆಸ್ಪತ್ರೆಗೆ ಮತ್ತು ಮನೆಗೆ ತಲುಪಿಸುವಲ್ಲಿ ನೆರವಾದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

2 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

2 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

3 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

10 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

14 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

15 hours ago