ಮಾನವೀಯ ಸೇವೆಯೇ ಮರೆಯಾಗುತ್ತಿರುವ ಕಾಲ ಇದು. ಉಪಕರಿಸಿದರೆ, ಮರುಕ್ಷಣವೇ ಮರೆತು ಹೋಗುವ ಸಮಯ ಇದು. ಅಂತಹದ್ದರಲ್ಲಿ ಗ್ರಾಮೀಣ ಭಾಗದಲ್ಲಿ ನಡೆಯುತ್ತಿರುವ ಸೇವಾ ಕಾರ್ಯ ಗುರುತಿಸಿಕೊಂಡಿದೆ. ಹೀಗಾಗಿ ಸೇವೆ ಮಾಡಿರುವ ಸಂಸ್ಥೆಯೇ ನೆರವಾದ ಘಟನೆಯೊಂದು ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಡೆದಿದೆ.
ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ಹಾಲೆಮಜಲು ಎಂಬಲ್ಲಿ ಬೆಳಿಗ್ಗೆ ವೃದ್ದ ರೊಬ್ಬರು ಆಕಸ್ಮಿಕವಾಗಿ ಬಿದ್ದಿದ್ದರು .ಆ ಸಂದರ್ಭ ಗಮನಿಸಿದ ವಿನ್ಯಾಸ್ ಕೊಚ್ಚಿ ಅವರು ಗುತ್ತಿಗಾರು ಪ್ರದೇಶದಲ್ಲಿ ಕಳೆದ ಕೆಲ ಸಮಯಗಳಿಂದ ಅಮರ ಟಾರಿಟೇಬಲ್ ಟ್ರಸ್ಟ್ ಮೂಲಕ ಸಾಮಾಜಿಕ ಕೆಲಸ ಮಾಡುತ್ತಿರುವ ಆಂಬುಲೆನ್ಸ್ ಸೇವೆಗೆ ತಿಳಿಸಿದರು. ಸ್ಥಳೀಯರೆಲ್ಲರೂ ಜೊತೆಯಾಗಿ ತಕ್ಷಣವೇ ಅವರನ್ನು ಗುತ್ತಿಗಾರಿನ ಡಾ.ಅನಂತಕೃಷ್ಣ ಕಾಮತ್ ಅವರಲ್ಲಿ ಪ್ರಥಮ ಚಿಕಿತ್ಸೆ ನೀಡಿ ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿಸಿದರು. ನಂತರ ಸ್ವತಃ ಆಂಬುಲೆನ್ಸ್ ಮೂಲಕವೇ ಅವರ ಸಂಬಂಧಿಗಳ ಮನೆಯಾದ ದುಗಲಡ್ಕಕಕ್ಕೆ ತಲುಪಿಸುವಲ್ಲಿ ಯಶಸ್ವಿಯಾದರು. ಈ ವೇಳೆ ಚೇತರೀಕೆಗೊಂಡ ಗಾಯಾಳು ಆಂಬುಲೆನ್ಸ್ ಸೇವೆಗೆ ಸಹಾಯಧನ ನೀಡಿ ಮಾದರಿಯಾದರು. ಸೇವೆಯನ್ನು ನೆನೆದು ಧನ್ಯವಾದ ಅರ್ಪಿಸಿದರು.
ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯ ಜಗದೀಶ್ ಬಾಕಿಲ, ಮಾಧವ್ ಎರ್ದಡ್ಕ, ರಾಜೇಶ್ ಉತ್ರಂಬೆ, ರಾಜೇಶ್ ಕುಕ್ಕುಜೆ, ಗಿರೀಶ್ ಕಾಯರಮೊಗೇರ್, ತೇಜಾವತಿ ಸಹಕಾರ ನೀಡಿದ್ದರು. ಚಂದ್ರಶೇಖರ ಕಡೋಡಿ ಮತ್ತು ವಿನಯ್ ಮಾಡಬಾಕಿಲು ಆಸ್ಪತ್ರೆಗೆ ಮತ್ತು ಮನೆಗೆ ತಲುಪಿಸುವಲ್ಲಿ ನೆರವಾದರು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…