ಭಾರತೀಯ ಕರಾವಳಿ ರಕ್ಷಣಾ ಪಡೆಯು ಸಮುದ್ರದ ಮೂಲಕ ಅಡಿಕೆ ಕಳ್ಳಸಾಗಣೆ ಮಾಡುವ ಪ್ರಕರಣವನ್ನು ಪತ್ತೆ ಮಾಡಿದೆ. ಕರಾವಳಿ ರಕ್ಷಣಾ ಪಡೆ ಹಡಗು ‘ವರದ್’ ಬಂಗಾಳ ಕೊಲ್ಲಿಯಲ್ಲಿ ಗಸ್ತು ನಡೆಸುತ್ತಿದ್ದಾಗ ಮೀನುಗಾರಿಕಾ ದೋಣಿಯಲ್ಲಿ ಅಡಿಕೆ ಸಾಗಾಣಿಕೆ ಪ್ರಕರಣ ಒಡಿಸ್ಸಾ ಕರಾವಳಿಯಲ್ಲಿ ಬೆಳಕಿಗೆ ಬಂದಿದೆ. ಮೀನುಗಾರಿಕಾ ದೋಣಿಯಲ್ಲಿ 450 ಚೀಲ ಅಡಿಕೆ ಪತ್ತೆಯಾಗಿದ್ದು, ಪ್ರತಿಯೊಂದು ಚೀಲವು ಸುಮಾರು 50 ರಿಂದ 60 ಕೆಜಿ ತೂಕವಿತ್ತು. ಈ ಅಡಿಕೆಯ ಮಾರುಕಟ್ಟೆ ಮೌಲ್ಯ ಸುಮಾರು 1 ಕೋಟಿ ರೂ. ಎಂದು ಅಂದಾಜಿಸಲಾಗಿದೆ.…..ಮುಂದೆ ಓದಿ….
ಪಶ್ಚಿಮ ಬಂಗಾಳದ ಕಾಕ್ದ್ವೀಪ್ ಮೀನುಗಾರಿಕಾ ಬಂದರಿನಲ್ಲಿ ನೋಂದಾಯಿಸಲಾದ ಮೀನುಗಾರಿಕಾ ದೋಣಿಯು ಯಾವುದೇ ದಾಖಲೆಗಳಿಲ್ಲದೆ ಅಡಿಕೆ ಸಾಗಿಸುತ್ತಿತ್ತು ಎಂದು ಭಾರತೀಯ ಕರಾವಳಿ ಕಾವಲು ಪಡೆ ತಿಳಿಸಿದೆ. ಮೀನುಗಾರಿಕಾ ದೋಣಿಯ 14 ಸಿಬ್ಬಂದಿಗಳ ಬಳಿಯೂ ಯಾವುದೇ ಬಯೋ-ಮೆಟ್ರಿಕ್ ಕಾರ್ಡ್ಗಳು ಕೂಡಾ ಇರಲಿಲ್ಲ. ದೋಣಿಯಲ್ಲಿ ಯಾವುದೇ ಮೀನುಗಾರಿಕೆ ಸಲಕರಣೆಗಳು ಅಥವಾ ಯಾವುದೇ ಮೀನು ಹಿಡಿಯುವ ಸಾಧನಗಳು ಕಂಡುಬಂದಿಲ್ಲ. ಹೆಚ್ಚಿನ ತನಿಖೆಗಾಗಿ ಒಡಿಶಾದ ಜಗತ್ಸಿಂಗ್ಪುರ ಜಿಲ್ಲೆಯ ಪ್ಯಾರದೀಪ್ ಬಂದರಿಗೆ ಸಾಗಿಸಲಾಗಿದೆ ತನಿಖೆ ನಡೆಯುತ್ತಿದೆ. ನಮ್ಮ ವ್ಯಾಟ್ಸಪ್ ಚಾನೆಲ್ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿರಿ..
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…