ಭಾರತೀಯ ಕರಾವಳಿ ರಕ್ಷಣಾ ಪಡೆಯು ಸಮುದ್ರದ ಮೂಲಕ ಅಡಿಕೆ ಕಳ್ಳಸಾಗಣೆ ಮಾಡುವ ಪ್ರಕರಣವನ್ನು ಪತ್ತೆ ಮಾಡಿದೆ. ಕರಾವಳಿ ರಕ್ಷಣಾ ಪಡೆ ಹಡಗು ‘ವರದ್’ ಬಂಗಾಳ ಕೊಲ್ಲಿಯಲ್ಲಿ ಗಸ್ತು ನಡೆಸುತ್ತಿದ್ದಾಗ ಮೀನುಗಾರಿಕಾ ದೋಣಿಯಲ್ಲಿ ಅಡಿಕೆ ಸಾಗಾಣಿಕೆ ಪ್ರಕರಣ ಒಡಿಸ್ಸಾ ಕರಾವಳಿಯಲ್ಲಿ ಬೆಳಕಿಗೆ ಬಂದಿದೆ. ಮೀನುಗಾರಿಕಾ ದೋಣಿಯಲ್ಲಿ 450 ಚೀಲ ಅಡಿಕೆ ಪತ್ತೆಯಾಗಿದ್ದು, ಪ್ರತಿಯೊಂದು ಚೀಲವು ಸುಮಾರು 50 ರಿಂದ 60 ಕೆಜಿ ತೂಕವಿತ್ತು. ಈ ಅಡಿಕೆಯ ಮಾರುಕಟ್ಟೆ ಮೌಲ್ಯ ಸುಮಾರು 1 ಕೋಟಿ ರೂ. ಎಂದು ಅಂದಾಜಿಸಲಾಗಿದೆ.…..ಮುಂದೆ ಓದಿ….
ಪಶ್ಚಿಮ ಬಂಗಾಳದ ಕಾಕ್ದ್ವೀಪ್ ಮೀನುಗಾರಿಕಾ ಬಂದರಿನಲ್ಲಿ ನೋಂದಾಯಿಸಲಾದ ಮೀನುಗಾರಿಕಾ ದೋಣಿಯು ಯಾವುದೇ ದಾಖಲೆಗಳಿಲ್ಲದೆ ಅಡಿಕೆ ಸಾಗಿಸುತ್ತಿತ್ತು ಎಂದು ಭಾರತೀಯ ಕರಾವಳಿ ಕಾವಲು ಪಡೆ ತಿಳಿಸಿದೆ. ಮೀನುಗಾರಿಕಾ ದೋಣಿಯ 14 ಸಿಬ್ಬಂದಿಗಳ ಬಳಿಯೂ ಯಾವುದೇ ಬಯೋ-ಮೆಟ್ರಿಕ್ ಕಾರ್ಡ್ಗಳು ಕೂಡಾ ಇರಲಿಲ್ಲ. ದೋಣಿಯಲ್ಲಿ ಯಾವುದೇ ಮೀನುಗಾರಿಕೆ ಸಲಕರಣೆಗಳು ಅಥವಾ ಯಾವುದೇ ಮೀನು ಹಿಡಿಯುವ ಸಾಧನಗಳು ಕಂಡುಬಂದಿಲ್ಲ. ಹೆಚ್ಚಿನ ತನಿಖೆಗಾಗಿ ಒಡಿಶಾದ ಜಗತ್ಸಿಂಗ್ಪುರ ಜಿಲ್ಲೆಯ ಪ್ಯಾರದೀಪ್ ಬಂದರಿಗೆ ಸಾಗಿಸಲಾಗಿದೆ ತನಿಖೆ ನಡೆಯುತ್ತಿದೆ. ನಮ್ಮ ವ್ಯಾಟ್ಸಪ್ ಚಾನೆಲ್ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿರಿ..
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…
ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…