ಭಾರತೀಯ ಕರಾವಳಿ ರಕ್ಷಣಾ ಪಡೆಯು ಸಮುದ್ರದ ಮೂಲಕ ಅಡಿಕೆ ಕಳ್ಳಸಾಗಣೆ ಮಾಡುವ ಪ್ರಕರಣವನ್ನು ಪತ್ತೆ ಮಾಡಿದೆ. ಕರಾವಳಿ ರಕ್ಷಣಾ ಪಡೆ ಹಡಗು ‘ವರದ್’ ಬಂಗಾಳ ಕೊಲ್ಲಿಯಲ್ಲಿ ಗಸ್ತು ನಡೆಸುತ್ತಿದ್ದಾಗ ಮೀನುಗಾರಿಕಾ ದೋಣಿಯಲ್ಲಿ ಅಡಿಕೆ ಸಾಗಾಣಿಕೆ ಪ್ರಕರಣ ಒಡಿಸ್ಸಾ ಕರಾವಳಿಯಲ್ಲಿ ಬೆಳಕಿಗೆ ಬಂದಿದೆ. ಮೀನುಗಾರಿಕಾ ದೋಣಿಯಲ್ಲಿ 450 ಚೀಲ ಅಡಿಕೆ ಪತ್ತೆಯಾಗಿದ್ದು, ಪ್ರತಿಯೊಂದು ಚೀಲವು ಸುಮಾರು 50 ರಿಂದ 60 ಕೆಜಿ ತೂಕವಿತ್ತು. ಈ ಅಡಿಕೆಯ ಮಾರುಕಟ್ಟೆ ಮೌಲ್ಯ ಸುಮಾರು 1 ಕೋಟಿ ರೂ. ಎಂದು ಅಂದಾಜಿಸಲಾಗಿದೆ.…..ಮುಂದೆ ಓದಿ….
ಪಶ್ಚಿಮ ಬಂಗಾಳದ ಕಾಕ್ದ್ವೀಪ್ ಮೀನುಗಾರಿಕಾ ಬಂದರಿನಲ್ಲಿ ನೋಂದಾಯಿಸಲಾದ ಮೀನುಗಾರಿಕಾ ದೋಣಿಯು ಯಾವುದೇ ದಾಖಲೆಗಳಿಲ್ಲದೆ ಅಡಿಕೆ ಸಾಗಿಸುತ್ತಿತ್ತು ಎಂದು ಭಾರತೀಯ ಕರಾವಳಿ ಕಾವಲು ಪಡೆ ತಿಳಿಸಿದೆ. ಮೀನುಗಾರಿಕಾ ದೋಣಿಯ 14 ಸಿಬ್ಬಂದಿಗಳ ಬಳಿಯೂ ಯಾವುದೇ ಬಯೋ-ಮೆಟ್ರಿಕ್ ಕಾರ್ಡ್ಗಳು ಕೂಡಾ ಇರಲಿಲ್ಲ. ದೋಣಿಯಲ್ಲಿ ಯಾವುದೇ ಮೀನುಗಾರಿಕೆ ಸಲಕರಣೆಗಳು ಅಥವಾ ಯಾವುದೇ ಮೀನು ಹಿಡಿಯುವ ಸಾಧನಗಳು ಕಂಡುಬಂದಿಲ್ಲ. ಹೆಚ್ಚಿನ ತನಿಖೆಗಾಗಿ ಒಡಿಶಾದ ಜಗತ್ಸಿಂಗ್ಪುರ ಜಿಲ್ಲೆಯ ಪ್ಯಾರದೀಪ್ ಬಂದರಿಗೆ ಸಾಗಿಸಲಾಗಿದೆ ತನಿಖೆ ನಡೆಯುತ್ತಿದೆ. ನಮ್ಮ ವ್ಯಾಟ್ಸಪ್ ಚಾನೆಲ್ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿರಿ..
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…