ಭಾರತೀಯ ಕರಾವಳಿ ರಕ್ಷಣಾ ಪಡೆಯು ಸಮುದ್ರದ ಮೂಲಕ ಅಡಿಕೆ ಕಳ್ಳಸಾಗಣೆ ಮಾಡುವ ಪ್ರಕರಣವನ್ನು ಪತ್ತೆ ಮಾಡಿದೆ. ಕರಾವಳಿ ರಕ್ಷಣಾ ಪಡೆ ಹಡಗು ‘ವರದ್’ ಬಂಗಾಳ ಕೊಲ್ಲಿಯಲ್ಲಿ ಗಸ್ತು ನಡೆಸುತ್ತಿದ್ದಾಗ ಮೀನುಗಾರಿಕಾ ದೋಣಿಯಲ್ಲಿ ಅಡಿಕೆ ಸಾಗಾಣಿಕೆ ಪ್ರಕರಣ ಒಡಿಸ್ಸಾ ಕರಾವಳಿಯಲ್ಲಿ ಬೆಳಕಿಗೆ ಬಂದಿದೆ. ಮೀನುಗಾರಿಕಾ ದೋಣಿಯಲ್ಲಿ 450 ಚೀಲ ಅಡಿಕೆ ಪತ್ತೆಯಾಗಿದ್ದು, ಪ್ರತಿಯೊಂದು ಚೀಲವು ಸುಮಾರು 50 ರಿಂದ 60 ಕೆಜಿ ತೂಕವಿತ್ತು. ಈ ಅಡಿಕೆಯ ಮಾರುಕಟ್ಟೆ ಮೌಲ್ಯ ಸುಮಾರು 1 ಕೋಟಿ ರೂ. ಎಂದು ಅಂದಾಜಿಸಲಾಗಿದೆ.…..ಮುಂದೆ ಓದಿ….
ಪಶ್ಚಿಮ ಬಂಗಾಳದ ಕಾಕ್ದ್ವೀಪ್ ಮೀನುಗಾರಿಕಾ ಬಂದರಿನಲ್ಲಿ ನೋಂದಾಯಿಸಲಾದ ಮೀನುಗಾರಿಕಾ ದೋಣಿಯು ಯಾವುದೇ ದಾಖಲೆಗಳಿಲ್ಲದೆ ಅಡಿಕೆ ಸಾಗಿಸುತ್ತಿತ್ತು ಎಂದು ಭಾರತೀಯ ಕರಾವಳಿ ಕಾವಲು ಪಡೆ ತಿಳಿಸಿದೆ. ಮೀನುಗಾರಿಕಾ ದೋಣಿಯ 14 ಸಿಬ್ಬಂದಿಗಳ ಬಳಿಯೂ ಯಾವುದೇ ಬಯೋ-ಮೆಟ್ರಿಕ್ ಕಾರ್ಡ್ಗಳು ಕೂಡಾ ಇರಲಿಲ್ಲ. ದೋಣಿಯಲ್ಲಿ ಯಾವುದೇ ಮೀನುಗಾರಿಕೆ ಸಲಕರಣೆಗಳು ಅಥವಾ ಯಾವುದೇ ಮೀನು ಹಿಡಿಯುವ ಸಾಧನಗಳು ಕಂಡುಬಂದಿಲ್ಲ. ಹೆಚ್ಚಿನ ತನಿಖೆಗಾಗಿ ಒಡಿಶಾದ ಜಗತ್ಸಿಂಗ್ಪುರ ಜಿಲ್ಲೆಯ ಪ್ಯಾರದೀಪ್ ಬಂದರಿಗೆ ಸಾಗಿಸಲಾಗಿದೆ ತನಿಖೆ ನಡೆಯುತ್ತಿದೆ. ನಮ್ಮ ವ್ಯಾಟ್ಸಪ್ ಚಾನೆಲ್ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿರಿ..
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…