ಭಾರತೀಯ ಕರಾವಳಿ ರಕ್ಷಣಾ ಪಡೆಯು ಸಮುದ್ರದ ಮೂಲಕ ಅಡಿಕೆ ಕಳ್ಳಸಾಗಣೆ ಮಾಡುವ ಪ್ರಕರಣವನ್ನು ಪತ್ತೆ ಮಾಡಿದೆ. ಕರಾವಳಿ ರಕ್ಷಣಾ ಪಡೆ ಹಡಗು ‘ವರದ್’ ಬಂಗಾಳ ಕೊಲ್ಲಿಯಲ್ಲಿ ಗಸ್ತು ನಡೆಸುತ್ತಿದ್ದಾಗ ಮೀನುಗಾರಿಕಾ ದೋಣಿಯಲ್ಲಿ ಅಡಿಕೆ ಸಾಗಾಣಿಕೆ ಪ್ರಕರಣ ಒಡಿಸ್ಸಾ ಕರಾವಳಿಯಲ್ಲಿ ಬೆಳಕಿಗೆ ಬಂದಿದೆ. ಮೀನುಗಾರಿಕಾ ದೋಣಿಯಲ್ಲಿ 450 ಚೀಲ ಅಡಿಕೆ ಪತ್ತೆಯಾಗಿದ್ದು, ಪ್ರತಿಯೊಂದು ಚೀಲವು ಸುಮಾರು 50 ರಿಂದ 60 ಕೆಜಿ ತೂಕವಿತ್ತು. ಈ ಅಡಿಕೆಯ ಮಾರುಕಟ್ಟೆ ಮೌಲ್ಯ ಸುಮಾರು 1 ಕೋಟಿ ರೂ. ಎಂದು ಅಂದಾಜಿಸಲಾಗಿದೆ.…..ಮುಂದೆ ಓದಿ….
ಪಶ್ಚಿಮ ಬಂಗಾಳದ ಕಾಕ್ದ್ವೀಪ್ ಮೀನುಗಾರಿಕಾ ಬಂದರಿನಲ್ಲಿ ನೋಂದಾಯಿಸಲಾದ ಮೀನುಗಾರಿಕಾ ದೋಣಿಯು ಯಾವುದೇ ದಾಖಲೆಗಳಿಲ್ಲದೆ ಅಡಿಕೆ ಸಾಗಿಸುತ್ತಿತ್ತು ಎಂದು ಭಾರತೀಯ ಕರಾವಳಿ ಕಾವಲು ಪಡೆ ತಿಳಿಸಿದೆ. ಮೀನುಗಾರಿಕಾ ದೋಣಿಯ 14 ಸಿಬ್ಬಂದಿಗಳ ಬಳಿಯೂ ಯಾವುದೇ ಬಯೋ-ಮೆಟ್ರಿಕ್ ಕಾರ್ಡ್ಗಳು ಕೂಡಾ ಇರಲಿಲ್ಲ. ದೋಣಿಯಲ್ಲಿ ಯಾವುದೇ ಮೀನುಗಾರಿಕೆ ಸಲಕರಣೆಗಳು ಅಥವಾ ಯಾವುದೇ ಮೀನು ಹಿಡಿಯುವ ಸಾಧನಗಳು ಕಂಡುಬಂದಿಲ್ಲ. ಹೆಚ್ಚಿನ ತನಿಖೆಗಾಗಿ ಒಡಿಶಾದ ಜಗತ್ಸಿಂಗ್ಪುರ ಜಿಲ್ಲೆಯ ಪ್ಯಾರದೀಪ್ ಬಂದರಿಗೆ ಸಾಗಿಸಲಾಗಿದೆ ತನಿಖೆ ನಡೆಯುತ್ತಿದೆ. ನಮ್ಮ ವ್ಯಾಟ್ಸಪ್ ಚಾನೆಲ್ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿರಿ..
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…