ಭಾರತೀಯ ಕರಾವಳಿ ರಕ್ಷಣಾ ಪಡೆಯು ಸಮುದ್ರದ ಮೂಲಕ ಅಡಿಕೆ ಕಳ್ಳಸಾಗಣೆ ಮಾಡುವ ಪ್ರಕರಣವನ್ನು ಪತ್ತೆ ಮಾಡಿದೆ. ಕರಾವಳಿ ರಕ್ಷಣಾ ಪಡೆ ಹಡಗು ‘ವರದ್’ ಬಂಗಾಳ ಕೊಲ್ಲಿಯಲ್ಲಿ ಗಸ್ತು ನಡೆಸುತ್ತಿದ್ದಾಗ ಮೀನುಗಾರಿಕಾ ದೋಣಿಯಲ್ಲಿ ಅಡಿಕೆ ಸಾಗಾಣಿಕೆ ಪ್ರಕರಣ ಒಡಿಸ್ಸಾ ಕರಾವಳಿಯಲ್ಲಿ ಬೆಳಕಿಗೆ ಬಂದಿದೆ. ಮೀನುಗಾರಿಕಾ ದೋಣಿಯಲ್ಲಿ 450 ಚೀಲ ಅಡಿಕೆ ಪತ್ತೆಯಾಗಿದ್ದು, ಪ್ರತಿಯೊಂದು ಚೀಲವು ಸುಮಾರು 50 ರಿಂದ 60 ಕೆಜಿ ತೂಕವಿತ್ತು. ಈ ಅಡಿಕೆಯ ಮಾರುಕಟ್ಟೆ ಮೌಲ್ಯ ಸುಮಾರು 1 ಕೋಟಿ ರೂ. ಎಂದು ಅಂದಾಜಿಸಲಾಗಿದೆ.…..ಮುಂದೆ ಓದಿ….
ಪಶ್ಚಿಮ ಬಂಗಾಳದ ಕಾಕ್ದ್ವೀಪ್ ಮೀನುಗಾರಿಕಾ ಬಂದರಿನಲ್ಲಿ ನೋಂದಾಯಿಸಲಾದ ಮೀನುಗಾರಿಕಾ ದೋಣಿಯು ಯಾವುದೇ ದಾಖಲೆಗಳಿಲ್ಲದೆ ಅಡಿಕೆ ಸಾಗಿಸುತ್ತಿತ್ತು ಎಂದು ಭಾರತೀಯ ಕರಾವಳಿ ಕಾವಲು ಪಡೆ ತಿಳಿಸಿದೆ. ಮೀನುಗಾರಿಕಾ ದೋಣಿಯ 14 ಸಿಬ್ಬಂದಿಗಳ ಬಳಿಯೂ ಯಾವುದೇ ಬಯೋ-ಮೆಟ್ರಿಕ್ ಕಾರ್ಡ್ಗಳು ಕೂಡಾ ಇರಲಿಲ್ಲ. ದೋಣಿಯಲ್ಲಿ ಯಾವುದೇ ಮೀನುಗಾರಿಕೆ ಸಲಕರಣೆಗಳು ಅಥವಾ ಯಾವುದೇ ಮೀನು ಹಿಡಿಯುವ ಸಾಧನಗಳು ಕಂಡುಬಂದಿಲ್ಲ. ಹೆಚ್ಚಿನ ತನಿಖೆಗಾಗಿ ಒಡಿಶಾದ ಜಗತ್ಸಿಂಗ್ಪುರ ಜಿಲ್ಲೆಯ ಪ್ಯಾರದೀಪ್ ಬಂದರಿಗೆ ಸಾಗಿಸಲಾಗಿದೆ ತನಿಖೆ ನಡೆಯುತ್ತಿದೆ. ನಮ್ಮ ವ್ಯಾಟ್ಸಪ್ ಚಾನೆಲ್ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿರಿ..
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…