ಭಾರತೀಯ ಕರಾವಳಿ ರಕ್ಷಣಾ ಪಡೆಯು ಸಮುದ್ರದ ಮೂಲಕ ಅಡಿಕೆ ಕಳ್ಳಸಾಗಣೆ ಮಾಡುವ ಪ್ರಕರಣವನ್ನು ಪತ್ತೆ ಮಾಡಿದೆ. ಕರಾವಳಿ ರಕ್ಷಣಾ ಪಡೆ ಹಡಗು ‘ವರದ್’ ಬಂಗಾಳ ಕೊಲ್ಲಿಯಲ್ಲಿ ಗಸ್ತು ನಡೆಸುತ್ತಿದ್ದಾಗ ಮೀನುಗಾರಿಕಾ ದೋಣಿಯಲ್ಲಿ ಅಡಿಕೆ ಸಾಗಾಣಿಕೆ ಪ್ರಕರಣ ಒಡಿಸ್ಸಾ ಕರಾವಳಿಯಲ್ಲಿ ಬೆಳಕಿಗೆ ಬಂದಿದೆ. ಮೀನುಗಾರಿಕಾ ದೋಣಿಯಲ್ಲಿ 450 ಚೀಲ ಅಡಿಕೆ ಪತ್ತೆಯಾಗಿದ್ದು, ಪ್ರತಿಯೊಂದು ಚೀಲವು ಸುಮಾರು 50 ರಿಂದ 60 ಕೆಜಿ ತೂಕವಿತ್ತು. ಈ ಅಡಿಕೆಯ ಮಾರುಕಟ್ಟೆ ಮೌಲ್ಯ ಸುಮಾರು 1 ಕೋಟಿ ರೂ. ಎಂದು ಅಂದಾಜಿಸಲಾಗಿದೆ.…..ಮುಂದೆ ಓದಿ….
ಪಶ್ಚಿಮ ಬಂಗಾಳದ ಕಾಕ್ದ್ವೀಪ್ ಮೀನುಗಾರಿಕಾ ಬಂದರಿನಲ್ಲಿ ನೋಂದಾಯಿಸಲಾದ ಮೀನುಗಾರಿಕಾ ದೋಣಿಯು ಯಾವುದೇ ದಾಖಲೆಗಳಿಲ್ಲದೆ ಅಡಿಕೆ ಸಾಗಿಸುತ್ತಿತ್ತು ಎಂದು ಭಾರತೀಯ ಕರಾವಳಿ ಕಾವಲು ಪಡೆ ತಿಳಿಸಿದೆ. ಮೀನುಗಾರಿಕಾ ದೋಣಿಯ 14 ಸಿಬ್ಬಂದಿಗಳ ಬಳಿಯೂ ಯಾವುದೇ ಬಯೋ-ಮೆಟ್ರಿಕ್ ಕಾರ್ಡ್ಗಳು ಕೂಡಾ ಇರಲಿಲ್ಲ. ದೋಣಿಯಲ್ಲಿ ಯಾವುದೇ ಮೀನುಗಾರಿಕೆ ಸಲಕರಣೆಗಳು ಅಥವಾ ಯಾವುದೇ ಮೀನು ಹಿಡಿಯುವ ಸಾಧನಗಳು ಕಂಡುಬಂದಿಲ್ಲ. ಹೆಚ್ಚಿನ ತನಿಖೆಗಾಗಿ ಒಡಿಶಾದ ಜಗತ್ಸಿಂಗ್ಪುರ ಜಿಲ್ಲೆಯ ಪ್ಯಾರದೀಪ್ ಬಂದರಿಗೆ ಸಾಗಿಸಲಾಗಿದೆ ತನಿಖೆ ನಡೆಯುತ್ತಿದೆ. ನಮ್ಮ ವ್ಯಾಟ್ಸಪ್ ಚಾನೆಲ್ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿರಿ..
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…