Advertisement
ಸುದ್ದಿಗಳು

ದಾಖಲೆ ಪ್ರಮಾಣದಲ್ಲಿ ಮೀನುಗಾರಿಕೆ | ಕುಸಿದ ಲಾಭಾಂಶ | ಮೀನುಗಾರರಿಗೆ ಸಿಹಿಕಹಿ |

Share

ಮೀನುಗಾರಿಗೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ತೀರದ ಜನರ ಜೀವನೋಪಾಯ. ಮತ್ಸ್ಯೋದ್ಯಮ ವಿಶ್ವ ಮಟ್ಟದಲ್ಲಿ ಈ ಜಿಲ್ಲೆಗಳು ಗುರುತಿಸಿಕೊಳ್ಳುವಂತೆ ಮಾಡಿದೆ. ವರ್ಷದ 10 ತಿಂಗಳು ಮೀನುಗಾರರ ಜೀವನ ಮೀನುಗಾರಿಕೆಯಲ್ಲೇ ಕಳೆಯುತ್ತದೆ. ಈ ಬಾರಿ ಮೀನುಗಾರಿಕೆ ನಡೆದರೂ ನಿರೀಕ್ಷಿತ ಮಟ್ಟದಲ್ಲಿ ನಡೆದಿದೆ. ಮೀನುಗಾರರ ಬದುಕು ಸಾಗಿದೆ, ಆದರೆ ನಿರೀಕ್ಷಿತ ಆದಾಯ ಸಾಧ್ಯವಾಗಿಲ್ಲ.

ಈ ಬಾರಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಪ್ರಮಾಣದಲ್ಲಿ ಮೀನುಗಾರಿಕೆ ನಡೆದಿದೆ. ಆದರೆ, ಲಾಭಾಂಶ ಮಾತ್ರ ಕಡಿಮೆ ಆಗಿದೆ. 2022-23 ನೇ ಸಾಲಿನ ಋತುವಿನಲ್ಲಿ ಮಳೆ, ಚಂಡಮಾರುತದ ಎಫೆಕ್ಟ್‌ ಕಡಿಮೆ ಇದ್ದಿದ್ರಿಂದ ಈ ಸಾಲಿನ ಅಂತ್ಯದವರೆಗೂ (ಮೇ 31) ಮೀನುಗಾರಿಕೆ ನಡೆಸಲು ಸಾಧ್ಯವಾಗಿದೆ. ಆದರೆ, ತೀವ್ರ ಬೆಲೆ ಕುಸಿತ, ರಫ್ತು ಪ್ರಮಾಣ ಕಡಿಮೆ ಇದೆಲ್ಲವೂ ಮೀನುಗಾರರಿಗೆ ಹೆಚ್ಚಿನ ಲಾಭವನ್ನು ತಂದಿಲ್ಲ. ಆದರೆ ಸ್ಥಳೀಯ ಗ್ರಾಹಕರಿಗೆ ಮಾತ್ರ ಕಡಿಮೆ ಬೆಲೆಯಲ್ಲಿ ಮೀನುಗಳು ಸಿಗುವಂತಾಗಿತ್ತು.

ಹೇಗಿತ್ತು ಈ ಋತುವಿನ ಮೀನುಗಾರಿಕೆ? : ಈ ವರ್ಷ ಅಧಿಕ ಪ್ರಮಾಣದಲ್ಲಿ ಮೀನುಗಾರಿಕೆ ನಡೆದಿದೆ. ಈ ಋತುವಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3,33,537 ಮೆಟ್ರಿಕ್‌ ಟನ್​ನಷ್ಟು ಹಾಗೂ ಉಡುಪಿ ಜಿಲ್ಲೆಯಲ್ಲಿ 2,12,081 ಮೆಟ್ರಿಕ್‌ ಟನ್‌ ಮೀನುಗಾರಿಕೆ ನಡೆದಿದೆ. ಹಿಂದಿನ ವರುಷಗಳಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮೀನುಗಾರಿಕೆ ನಡೆದಿದೆ. ಒಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2022-23 ನೇ ಸಾಲಿನ ಋತುವಿನಲ್ಲಿ 5,45,618 ಮೆಟ್ರಿಕ್‌ ಟನ್‌ ಮೀನುಗಾರಿಕೆ ನಡೆದಿದೆ. ಕಳೆದ ಬಾರಿಗೆ ಹೋಲಿಸಿದರೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ತಿರ ಹತ್ತಿರ ಮೂರು ಪಟ್ಟಿನಷ್ಟು ಮೀನುಗಾರಿಕೆ ಅಧಿಕವಾಗಿದೆ.

ಕೈಗೂಡದ ನಿರೀಕ್ಷೆ : ಈ ಬಾರಿ ನಿರೀಕ್ಷೆಯಂತೆ ಫಿಶ್‌ ಮಿಲ್​ಗಳು ಸರಿಯಾಗಿ ಕಾರ್ಯ ನಿರ್ವಹಿಸಿಲ್ಲ ಎನ್ನುವ ಮಾತಿದೆ. ಉಳ್ಳಾಲದ ಒಂದೇ ಭಾಗದಲ್ಲಿರುವ 13 ಫಿಶ್‌ ಮಿಲ್​ಗಳು ವರ್ಷವಿಡೀ ಬಂದ್‌ ಆಗಿತ್ತು. ಜೊತೆಗೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕೂಡಾ ತಲೆದೋರಿದ್ದರಿಂದ ಮೀನು ರಫ್ತಿನ ಮೇಲೆ  ಹೊಡೆತ ಬಿದ್ದಿದೆ. ಮೀನುಗಾರಿಕೆ ಹೆಚ್ಚಿದ್ದರೂ, ಲಾಭಾಂಶ ಮಾತ್ರ ಶೇಕಡಾ 30-40 ರಷ್ಟು ಕುಸಿದಿದೆ ಎಂದು ಮೀನುಗಾರರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

7 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago