Advertisement
ಸುದ್ದಿಗಳು

ದಾಖಲೆ ಪ್ರಮಾಣದಲ್ಲಿ ಮೀನುಗಾರಿಕೆ | ಕುಸಿದ ಲಾಭಾಂಶ | ಮೀನುಗಾರರಿಗೆ ಸಿಹಿಕಹಿ |

Share

ಮೀನುಗಾರಿಗೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ತೀರದ ಜನರ ಜೀವನೋಪಾಯ. ಮತ್ಸ್ಯೋದ್ಯಮ ವಿಶ್ವ ಮಟ್ಟದಲ್ಲಿ ಈ ಜಿಲ್ಲೆಗಳು ಗುರುತಿಸಿಕೊಳ್ಳುವಂತೆ ಮಾಡಿದೆ. ವರ್ಷದ 10 ತಿಂಗಳು ಮೀನುಗಾರರ ಜೀವನ ಮೀನುಗಾರಿಕೆಯಲ್ಲೇ ಕಳೆಯುತ್ತದೆ. ಈ ಬಾರಿ ಮೀನುಗಾರಿಕೆ ನಡೆದರೂ ನಿರೀಕ್ಷಿತ ಮಟ್ಟದಲ್ಲಿ ನಡೆದಿದೆ. ಮೀನುಗಾರರ ಬದುಕು ಸಾಗಿದೆ, ಆದರೆ ನಿರೀಕ್ಷಿತ ಆದಾಯ ಸಾಧ್ಯವಾಗಿಲ್ಲ.

Advertisement
Advertisement

ಈ ಬಾರಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಪ್ರಮಾಣದಲ್ಲಿ ಮೀನುಗಾರಿಕೆ ನಡೆದಿದೆ. ಆದರೆ, ಲಾಭಾಂಶ ಮಾತ್ರ ಕಡಿಮೆ ಆಗಿದೆ. 2022-23 ನೇ ಸಾಲಿನ ಋತುವಿನಲ್ಲಿ ಮಳೆ, ಚಂಡಮಾರುತದ ಎಫೆಕ್ಟ್‌ ಕಡಿಮೆ ಇದ್ದಿದ್ರಿಂದ ಈ ಸಾಲಿನ ಅಂತ್ಯದವರೆಗೂ (ಮೇ 31) ಮೀನುಗಾರಿಕೆ ನಡೆಸಲು ಸಾಧ್ಯವಾಗಿದೆ. ಆದರೆ, ತೀವ್ರ ಬೆಲೆ ಕುಸಿತ, ರಫ್ತು ಪ್ರಮಾಣ ಕಡಿಮೆ ಇದೆಲ್ಲವೂ ಮೀನುಗಾರರಿಗೆ ಹೆಚ್ಚಿನ ಲಾಭವನ್ನು ತಂದಿಲ್ಲ. ಆದರೆ ಸ್ಥಳೀಯ ಗ್ರಾಹಕರಿಗೆ ಮಾತ್ರ ಕಡಿಮೆ ಬೆಲೆಯಲ್ಲಿ ಮೀನುಗಳು ಸಿಗುವಂತಾಗಿತ್ತು.

Advertisement

ಹೇಗಿತ್ತು ಈ ಋತುವಿನ ಮೀನುಗಾರಿಕೆ? : ಈ ವರ್ಷ ಅಧಿಕ ಪ್ರಮಾಣದಲ್ಲಿ ಮೀನುಗಾರಿಕೆ ನಡೆದಿದೆ. ಈ ಋತುವಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3,33,537 ಮೆಟ್ರಿಕ್‌ ಟನ್​ನಷ್ಟು ಹಾಗೂ ಉಡುಪಿ ಜಿಲ್ಲೆಯಲ್ಲಿ 2,12,081 ಮೆಟ್ರಿಕ್‌ ಟನ್‌ ಮೀನುಗಾರಿಕೆ ನಡೆದಿದೆ. ಹಿಂದಿನ ವರುಷಗಳಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮೀನುಗಾರಿಕೆ ನಡೆದಿದೆ. ಒಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2022-23 ನೇ ಸಾಲಿನ ಋತುವಿನಲ್ಲಿ 5,45,618 ಮೆಟ್ರಿಕ್‌ ಟನ್‌ ಮೀನುಗಾರಿಕೆ ನಡೆದಿದೆ. ಕಳೆದ ಬಾರಿಗೆ ಹೋಲಿಸಿದರೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ತಿರ ಹತ್ತಿರ ಮೂರು ಪಟ್ಟಿನಷ್ಟು ಮೀನುಗಾರಿಕೆ ಅಧಿಕವಾಗಿದೆ.

ಕೈಗೂಡದ ನಿರೀಕ್ಷೆ : ಈ ಬಾರಿ ನಿರೀಕ್ಷೆಯಂತೆ ಫಿಶ್‌ ಮಿಲ್​ಗಳು ಸರಿಯಾಗಿ ಕಾರ್ಯ ನಿರ್ವಹಿಸಿಲ್ಲ ಎನ್ನುವ ಮಾತಿದೆ. ಉಳ್ಳಾಲದ ಒಂದೇ ಭಾಗದಲ್ಲಿರುವ 13 ಫಿಶ್‌ ಮಿಲ್​ಗಳು ವರ್ಷವಿಡೀ ಬಂದ್‌ ಆಗಿತ್ತು. ಜೊತೆಗೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕೂಡಾ ತಲೆದೋರಿದ್ದರಿಂದ ಮೀನು ರಫ್ತಿನ ಮೇಲೆ  ಹೊಡೆತ ಬಿದ್ದಿದೆ. ಮೀನುಗಾರಿಕೆ ಹೆಚ್ಚಿದ್ದರೂ, ಲಾಭಾಂಶ ಮಾತ್ರ ಶೇಕಡಾ 30-40 ರಷ್ಟು ಕುಸಿದಿದೆ ಎಂದು ಮೀನುಗಾರರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

4 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

5 hours ago

ಸಕ್ಕರೆ ತಿನ್ನುವುದಕ್ಕಿಂತ ಶುಗರ್ ಫ್ರೀ ಸೇವನೆ ಹೆಚ್ಚು ಅಪಾಯಕಾರಿ…! |

`ಶುಗರ್ ಫ್ರೀ’(Sugar Free) ಎಂಬ ಹೆಸರಿನಲ್ಲಿ ಕೃತಕ ಸಿಹಿಕಾರಕಗಳ(Artificial sweet) ಟ್ರೆಂಡ್(Trend) ಹೆಚ್ಚುತ್ತಿರುವ…

5 hours ago

Karnataka Weather | 14-05-2024 | ಹಲವು ಕಡೆ ಗುಡಗು ಸಹಿತ ಮಳೆ ಮುಂದುವರಿಕೆ | ಮೇ.20 ರ ನಂತರ ಮಳೆ ಅಬ್ಬರ ಕಡಿಮೆ |

ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

6 hours ago

ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು ಸಾಧ್ಯವೇ?

ಕೃಷಿ ನೆಲದಲ್ಲಿ ಸಾವಯವ ಇಂಗಾಲದ(Carbon) ಕೊರತೆ ಕಾಡುತ್ತಿದೆ. ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು…

6 hours ago