Advertisement
ಸುದ್ದಿಗಳು

ದಾಖಲೆ ಪ್ರಮಾಣದಲ್ಲಿ ಮೀನುಗಾರಿಕೆ | ಕುಸಿದ ಲಾಭಾಂಶ | ಮೀನುಗಾರರಿಗೆ ಸಿಹಿಕಹಿ |

Share

ಮೀನುಗಾರಿಗೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ತೀರದ ಜನರ ಜೀವನೋಪಾಯ. ಮತ್ಸ್ಯೋದ್ಯಮ ವಿಶ್ವ ಮಟ್ಟದಲ್ಲಿ ಈ ಜಿಲ್ಲೆಗಳು ಗುರುತಿಸಿಕೊಳ್ಳುವಂತೆ ಮಾಡಿದೆ. ವರ್ಷದ 10 ತಿಂಗಳು ಮೀನುಗಾರರ ಜೀವನ ಮೀನುಗಾರಿಕೆಯಲ್ಲೇ ಕಳೆಯುತ್ತದೆ. ಈ ಬಾರಿ ಮೀನುಗಾರಿಕೆ ನಡೆದರೂ ನಿರೀಕ್ಷಿತ ಮಟ್ಟದಲ್ಲಿ ನಡೆದಿದೆ. ಮೀನುಗಾರರ ಬದುಕು ಸಾಗಿದೆ, ಆದರೆ ನಿರೀಕ್ಷಿತ ಆದಾಯ ಸಾಧ್ಯವಾಗಿಲ್ಲ.

ಈ ಬಾರಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಪ್ರಮಾಣದಲ್ಲಿ ಮೀನುಗಾರಿಕೆ ನಡೆದಿದೆ. ಆದರೆ, ಲಾಭಾಂಶ ಮಾತ್ರ ಕಡಿಮೆ ಆಗಿದೆ. 2022-23 ನೇ ಸಾಲಿನ ಋತುವಿನಲ್ಲಿ ಮಳೆ, ಚಂಡಮಾರುತದ ಎಫೆಕ್ಟ್‌ ಕಡಿಮೆ ಇದ್ದಿದ್ರಿಂದ ಈ ಸಾಲಿನ ಅಂತ್ಯದವರೆಗೂ (ಮೇ 31) ಮೀನುಗಾರಿಕೆ ನಡೆಸಲು ಸಾಧ್ಯವಾಗಿದೆ. ಆದರೆ, ತೀವ್ರ ಬೆಲೆ ಕುಸಿತ, ರಫ್ತು ಪ್ರಮಾಣ ಕಡಿಮೆ ಇದೆಲ್ಲವೂ ಮೀನುಗಾರರಿಗೆ ಹೆಚ್ಚಿನ ಲಾಭವನ್ನು ತಂದಿಲ್ಲ. ಆದರೆ ಸ್ಥಳೀಯ ಗ್ರಾಹಕರಿಗೆ ಮಾತ್ರ ಕಡಿಮೆ ಬೆಲೆಯಲ್ಲಿ ಮೀನುಗಳು ಸಿಗುವಂತಾಗಿತ್ತು.

ಹೇಗಿತ್ತು ಈ ಋತುವಿನ ಮೀನುಗಾರಿಕೆ? : ಈ ವರ್ಷ ಅಧಿಕ ಪ್ರಮಾಣದಲ್ಲಿ ಮೀನುಗಾರಿಕೆ ನಡೆದಿದೆ. ಈ ಋತುವಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3,33,537 ಮೆಟ್ರಿಕ್‌ ಟನ್​ನಷ್ಟು ಹಾಗೂ ಉಡುಪಿ ಜಿಲ್ಲೆಯಲ್ಲಿ 2,12,081 ಮೆಟ್ರಿಕ್‌ ಟನ್‌ ಮೀನುಗಾರಿಕೆ ನಡೆದಿದೆ. ಹಿಂದಿನ ವರುಷಗಳಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮೀನುಗಾರಿಕೆ ನಡೆದಿದೆ. ಒಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2022-23 ನೇ ಸಾಲಿನ ಋತುವಿನಲ್ಲಿ 5,45,618 ಮೆಟ್ರಿಕ್‌ ಟನ್‌ ಮೀನುಗಾರಿಕೆ ನಡೆದಿದೆ. ಕಳೆದ ಬಾರಿಗೆ ಹೋಲಿಸಿದರೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ತಿರ ಹತ್ತಿರ ಮೂರು ಪಟ್ಟಿನಷ್ಟು ಮೀನುಗಾರಿಕೆ ಅಧಿಕವಾಗಿದೆ.

ಕೈಗೂಡದ ನಿರೀಕ್ಷೆ : ಈ ಬಾರಿ ನಿರೀಕ್ಷೆಯಂತೆ ಫಿಶ್‌ ಮಿಲ್​ಗಳು ಸರಿಯಾಗಿ ಕಾರ್ಯ ನಿರ್ವಹಿಸಿಲ್ಲ ಎನ್ನುವ ಮಾತಿದೆ. ಉಳ್ಳಾಲದ ಒಂದೇ ಭಾಗದಲ್ಲಿರುವ 13 ಫಿಶ್‌ ಮಿಲ್​ಗಳು ವರ್ಷವಿಡೀ ಬಂದ್‌ ಆಗಿತ್ತು. ಜೊತೆಗೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕೂಡಾ ತಲೆದೋರಿದ್ದರಿಂದ ಮೀನು ರಫ್ತಿನ ಮೇಲೆ  ಹೊಡೆತ ಬಿದ್ದಿದೆ. ಮೀನುಗಾರಿಕೆ ಹೆಚ್ಚಿದ್ದರೂ, ಲಾಭಾಂಶ ಮಾತ್ರ ಶೇಕಡಾ 30-40 ರಷ್ಟು ಕುಸಿದಿದೆ ಎಂದು ಮೀನುಗಾರರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

3 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

4 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago