Advertisement
ಸುದ್ದಿಗಳು

ದಾಖಲೆ ಪ್ರಮಾಣದಲ್ಲಿ ಮೀನುಗಾರಿಕೆ | ಕುಸಿದ ಲಾಭಾಂಶ | ಮೀನುಗಾರರಿಗೆ ಸಿಹಿಕಹಿ |

Share

ಮೀನುಗಾರಿಗೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ತೀರದ ಜನರ ಜೀವನೋಪಾಯ. ಮತ್ಸ್ಯೋದ್ಯಮ ವಿಶ್ವ ಮಟ್ಟದಲ್ಲಿ ಈ ಜಿಲ್ಲೆಗಳು ಗುರುತಿಸಿಕೊಳ್ಳುವಂತೆ ಮಾಡಿದೆ. ವರ್ಷದ 10 ತಿಂಗಳು ಮೀನುಗಾರರ ಜೀವನ ಮೀನುಗಾರಿಕೆಯಲ್ಲೇ ಕಳೆಯುತ್ತದೆ. ಈ ಬಾರಿ ಮೀನುಗಾರಿಕೆ ನಡೆದರೂ ನಿರೀಕ್ಷಿತ ಮಟ್ಟದಲ್ಲಿ ನಡೆದಿದೆ. ಮೀನುಗಾರರ ಬದುಕು ಸಾಗಿದೆ, ಆದರೆ ನಿರೀಕ್ಷಿತ ಆದಾಯ ಸಾಧ್ಯವಾಗಿಲ್ಲ.

ಈ ಬಾರಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಪ್ರಮಾಣದಲ್ಲಿ ಮೀನುಗಾರಿಕೆ ನಡೆದಿದೆ. ಆದರೆ, ಲಾಭಾಂಶ ಮಾತ್ರ ಕಡಿಮೆ ಆಗಿದೆ. 2022-23 ನೇ ಸಾಲಿನ ಋತುವಿನಲ್ಲಿ ಮಳೆ, ಚಂಡಮಾರುತದ ಎಫೆಕ್ಟ್‌ ಕಡಿಮೆ ಇದ್ದಿದ್ರಿಂದ ಈ ಸಾಲಿನ ಅಂತ್ಯದವರೆಗೂ (ಮೇ 31) ಮೀನುಗಾರಿಕೆ ನಡೆಸಲು ಸಾಧ್ಯವಾಗಿದೆ. ಆದರೆ, ತೀವ್ರ ಬೆಲೆ ಕುಸಿತ, ರಫ್ತು ಪ್ರಮಾಣ ಕಡಿಮೆ ಇದೆಲ್ಲವೂ ಮೀನುಗಾರರಿಗೆ ಹೆಚ್ಚಿನ ಲಾಭವನ್ನು ತಂದಿಲ್ಲ. ಆದರೆ ಸ್ಥಳೀಯ ಗ್ರಾಹಕರಿಗೆ ಮಾತ್ರ ಕಡಿಮೆ ಬೆಲೆಯಲ್ಲಿ ಮೀನುಗಳು ಸಿಗುವಂತಾಗಿತ್ತು.

ಹೇಗಿತ್ತು ಈ ಋತುವಿನ ಮೀನುಗಾರಿಕೆ? : ಈ ವರ್ಷ ಅಧಿಕ ಪ್ರಮಾಣದಲ್ಲಿ ಮೀನುಗಾರಿಕೆ ನಡೆದಿದೆ. ಈ ಋತುವಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3,33,537 ಮೆಟ್ರಿಕ್‌ ಟನ್​ನಷ್ಟು ಹಾಗೂ ಉಡುಪಿ ಜಿಲ್ಲೆಯಲ್ಲಿ 2,12,081 ಮೆಟ್ರಿಕ್‌ ಟನ್‌ ಮೀನುಗಾರಿಕೆ ನಡೆದಿದೆ. ಹಿಂದಿನ ವರುಷಗಳಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮೀನುಗಾರಿಕೆ ನಡೆದಿದೆ. ಒಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2022-23 ನೇ ಸಾಲಿನ ಋತುವಿನಲ್ಲಿ 5,45,618 ಮೆಟ್ರಿಕ್‌ ಟನ್‌ ಮೀನುಗಾರಿಕೆ ನಡೆದಿದೆ. ಕಳೆದ ಬಾರಿಗೆ ಹೋಲಿಸಿದರೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ತಿರ ಹತ್ತಿರ ಮೂರು ಪಟ್ಟಿನಷ್ಟು ಮೀನುಗಾರಿಕೆ ಅಧಿಕವಾಗಿದೆ.

ಕೈಗೂಡದ ನಿರೀಕ್ಷೆ : ಈ ಬಾರಿ ನಿರೀಕ್ಷೆಯಂತೆ ಫಿಶ್‌ ಮಿಲ್​ಗಳು ಸರಿಯಾಗಿ ಕಾರ್ಯ ನಿರ್ವಹಿಸಿಲ್ಲ ಎನ್ನುವ ಮಾತಿದೆ. ಉಳ್ಳಾಲದ ಒಂದೇ ಭಾಗದಲ್ಲಿರುವ 13 ಫಿಶ್‌ ಮಿಲ್​ಗಳು ವರ್ಷವಿಡೀ ಬಂದ್‌ ಆಗಿತ್ತು. ಜೊತೆಗೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕೂಡಾ ತಲೆದೋರಿದ್ದರಿಂದ ಮೀನು ರಫ್ತಿನ ಮೇಲೆ  ಹೊಡೆತ ಬಿದ್ದಿದೆ. ಮೀನುಗಾರಿಕೆ ಹೆಚ್ಚಿದ್ದರೂ, ಲಾಭಾಂಶ ಮಾತ್ರ ಶೇಕಡಾ 30-40 ರಷ್ಟು ಕುಸಿದಿದೆ ಎಂದು ಮೀನುಗಾರರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago