Advertisement
ಸುದ್ದಿಗಳು

ದಾಖಲೆ ಪ್ರಮಾಣದಲ್ಲಿ ಮೀನುಗಾರಿಕೆ | ಕುಸಿದ ಲಾಭಾಂಶ | ಮೀನುಗಾರರಿಗೆ ಸಿಹಿಕಹಿ |

Share

ಮೀನುಗಾರಿಗೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ತೀರದ ಜನರ ಜೀವನೋಪಾಯ. ಮತ್ಸ್ಯೋದ್ಯಮ ವಿಶ್ವ ಮಟ್ಟದಲ್ಲಿ ಈ ಜಿಲ್ಲೆಗಳು ಗುರುತಿಸಿಕೊಳ್ಳುವಂತೆ ಮಾಡಿದೆ. ವರ್ಷದ 10 ತಿಂಗಳು ಮೀನುಗಾರರ ಜೀವನ ಮೀನುಗಾರಿಕೆಯಲ್ಲೇ ಕಳೆಯುತ್ತದೆ. ಈ ಬಾರಿ ಮೀನುಗಾರಿಕೆ ನಡೆದರೂ ನಿರೀಕ್ಷಿತ ಮಟ್ಟದಲ್ಲಿ ನಡೆದಿದೆ. ಮೀನುಗಾರರ ಬದುಕು ಸಾಗಿದೆ, ಆದರೆ ನಿರೀಕ್ಷಿತ ಆದಾಯ ಸಾಧ್ಯವಾಗಿಲ್ಲ.

ಈ ಬಾರಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಪ್ರಮಾಣದಲ್ಲಿ ಮೀನುಗಾರಿಕೆ ನಡೆದಿದೆ. ಆದರೆ, ಲಾಭಾಂಶ ಮಾತ್ರ ಕಡಿಮೆ ಆಗಿದೆ. 2022-23 ನೇ ಸಾಲಿನ ಋತುವಿನಲ್ಲಿ ಮಳೆ, ಚಂಡಮಾರುತದ ಎಫೆಕ್ಟ್‌ ಕಡಿಮೆ ಇದ್ದಿದ್ರಿಂದ ಈ ಸಾಲಿನ ಅಂತ್ಯದವರೆಗೂ (ಮೇ 31) ಮೀನುಗಾರಿಕೆ ನಡೆಸಲು ಸಾಧ್ಯವಾಗಿದೆ. ಆದರೆ, ತೀವ್ರ ಬೆಲೆ ಕುಸಿತ, ರಫ್ತು ಪ್ರಮಾಣ ಕಡಿಮೆ ಇದೆಲ್ಲವೂ ಮೀನುಗಾರರಿಗೆ ಹೆಚ್ಚಿನ ಲಾಭವನ್ನು ತಂದಿಲ್ಲ. ಆದರೆ ಸ್ಥಳೀಯ ಗ್ರಾಹಕರಿಗೆ ಮಾತ್ರ ಕಡಿಮೆ ಬೆಲೆಯಲ್ಲಿ ಮೀನುಗಳು ಸಿಗುವಂತಾಗಿತ್ತು.

ಹೇಗಿತ್ತು ಈ ಋತುವಿನ ಮೀನುಗಾರಿಕೆ? : ಈ ವರ್ಷ ಅಧಿಕ ಪ್ರಮಾಣದಲ್ಲಿ ಮೀನುಗಾರಿಕೆ ನಡೆದಿದೆ. ಈ ಋತುವಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3,33,537 ಮೆಟ್ರಿಕ್‌ ಟನ್​ನಷ್ಟು ಹಾಗೂ ಉಡುಪಿ ಜಿಲ್ಲೆಯಲ್ಲಿ 2,12,081 ಮೆಟ್ರಿಕ್‌ ಟನ್‌ ಮೀನುಗಾರಿಕೆ ನಡೆದಿದೆ. ಹಿಂದಿನ ವರುಷಗಳಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮೀನುಗಾರಿಕೆ ನಡೆದಿದೆ. ಒಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2022-23 ನೇ ಸಾಲಿನ ಋತುವಿನಲ್ಲಿ 5,45,618 ಮೆಟ್ರಿಕ್‌ ಟನ್‌ ಮೀನುಗಾರಿಕೆ ನಡೆದಿದೆ. ಕಳೆದ ಬಾರಿಗೆ ಹೋಲಿಸಿದರೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ತಿರ ಹತ್ತಿರ ಮೂರು ಪಟ್ಟಿನಷ್ಟು ಮೀನುಗಾರಿಕೆ ಅಧಿಕವಾಗಿದೆ.

ಕೈಗೂಡದ ನಿರೀಕ್ಷೆ : ಈ ಬಾರಿ ನಿರೀಕ್ಷೆಯಂತೆ ಫಿಶ್‌ ಮಿಲ್​ಗಳು ಸರಿಯಾಗಿ ಕಾರ್ಯ ನಿರ್ವಹಿಸಿಲ್ಲ ಎನ್ನುವ ಮಾತಿದೆ. ಉಳ್ಳಾಲದ ಒಂದೇ ಭಾಗದಲ್ಲಿರುವ 13 ಫಿಶ್‌ ಮಿಲ್​ಗಳು ವರ್ಷವಿಡೀ ಬಂದ್‌ ಆಗಿತ್ತು. ಜೊತೆಗೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕೂಡಾ ತಲೆದೋರಿದ್ದರಿಂದ ಮೀನು ರಫ್ತಿನ ಮೇಲೆ  ಹೊಡೆತ ಬಿದ್ದಿದೆ. ಮೀನುಗಾರಿಕೆ ಹೆಚ್ಚಿದ್ದರೂ, ಲಾಭಾಂಶ ಮಾತ್ರ ಶೇಕಡಾ 30-40 ರಷ್ಟು ಕುಸಿದಿದೆ ಎಂದು ಮೀನುಗಾರರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

24 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago