Advertisement
MIRROR FOCUS

ಕರಾವಳಿಯ ಮೂಲಕಸುಬು ಮೀನುಗಾರಿಕೆಗೆ ಹೊಡೆತ | ಹವಾಮಾನ ವೈಪರೀತ್ಯದಿಂದ ಮತ್ಸ್ಯಕ್ಷಾಮ | ಇದಕ್ಕೆ ಕಾರಣಗಳೇನು..?

Share

ಕರಾವಳಿ(Coastal)ಮಾತ್ರವಲ್ಲ ಇಡೀ ದೇಶ ಮೀನನ್ನು ಆಹಾರವಾಗಿ(Fish food) ಉಪಯೋಗಿಸುತ್ತಾರೆ. ಅದರಲ್ಲೂ ಕರಾವಳಿ ತೀರದ ಮಂದಿ ಜಾಸ್ತಿ ಇದನ್ನು ಕಸುಬಾಗಿ(career) ನೆಚ್ಚಿಕೊಂಡಿದ್ದಾರೆ. ಮತ್ಸೋದ್ಯಮ(Fisheries) ಬಹಳ ದೊಡ್ಡ ಉದ್ಯಮವಾಗಿ ಬೆಳೆದಿದೆ. ವರ್ಷಕ್ಕೆ ಕೋಟಿಗಟ್ಟಲೆ ವ್ಯವಹಾರ ನಡೆಯುತ್ತದೆ. ಜೊತೆಗೆ ರಫ್ತಿನಲ್ಲೂ(Export) ಮೇಲುಗೈ ಸಾಧಿಸಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕರಾವಳಿಯ  ಸಮುದ್ರದಲ್ಲಿ(Ocean)  ಮತ್ಸ್ಯಕ್ಷಾಮದ ಭೀತಿ ಎದುರಾಗಿದೆ. ಮೀನುಗಾರಿಕೆಯ (Fishing) ಖರ್ಚುವೆಚ್ಚವನ್ನು ಸರಿದೂಗಿಸಲು ಸಾಧ್ಯವಾಗದೆ ಬೋಟುಗಳು ಅವಧಿಗೆ ಮುನ್ನವೇ ಕಡಲ ಕಿನಾರೆಯಲ್ಲಿ ಲಂಗರು ಹಾಕಲು ಆರಂಭಿಸಿದೆ. ಕಳೆದೊಂದು ತಿಂಗಳಿನಿಂದ ಪರ್ಸಿನ್ ಬೋಟ್‍ಗಳು ಸಮುದ್ರಕ್ಕಿಳಿಯುತ್ತಿಲ್ಲ. ಮತ್ಸ್ಯಕ್ಷಾಮಕ್ಕೆ ತಲೆದೋರಲು ಪ್ರಮುಖ ಕಾರಣ ಇತ್ತೀಚೆಗೆ ಕಾಡುತ್ತಿರುವ ಹವಾಮಾನ ವೈಪರೀತ್ಯ(weather extremes).

Advertisement
Advertisement

ಮಳೆ ಇಲ್ಲದಿರುವುದೇ ಕಾರಣ : ಈ ಬಾರಿ ಮಳೆಗಾಲದಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆ ಸುರಿದಿಲ್ಲ. ಮಳೆಗಾಲ ಮೀನುಗಳ ಸಂತಾನೋತ್ಪತ್ತಿಯ ಕಾಲ. ಈ ವೇಳೆ ಮಳೆ ನೀರಿನೊಂದಿಗೆ ಆಹಾರವೂ ಸಮುದ್ರ ಸೇರುತ್ತದೆ. ಆದರೆ ಮುಂಗಾರು ಕ್ಷೀಣಗೊಂಡಿದ್ದಲ್ಲದೇ, ಮೀನು ಸಂತತಿ ದಡದ ಬಳಿಗೆ ಬರಲು ಪೂರಕವಾಗುವಂತೆ ಸಮುದ್ರ ಮಂಥನವಾಗದಿರುವುದು ಮತ್ಸ್ಯಕ್ಷಾಮಕ್ಕೆ ಕಾರಣವಾಗಿದೆ.

Advertisement

ಅವೈಜ್ಞಾನಿಕ ಮೀನುಗಾರಿಕೆ : ಕೈಗಾರಿಕೆಗಳ ಕಲುಷಿತ ನೀರು ಸೇರಿದಂತೆ ಹಲವಾರು ಕಾರಣಗಳಿಂದ ಸಮುದ್ರ ಮಲೀನವಾಗುತ್ತಿದೆ. ಅಲ್ಲದೆ ಅವೈಜ್ಞಾನಿಕ ಮೀನುಗಾರಿಕೆಯು ಮತ್ತ್ಯಕ್ಷಾಮಕ್ಕೆ ಕಾರಣವಾಗುತ್ತಿದೆ. ಜೂನ್, ಜುಲೈನಲ್ಲಿ ಎರಡು ತಿಂಗಳ ಆಳ ಸಮುದ್ರ ಮೀನುಗಾರಿಕೆ ಸ್ಥಗಿತದ ಬಳಿಕ ಆಗಸ್ಟ್‍ನಿಂದ ಮೀನು ಹೇರಳವಾಗಿ ಸಿಗುವ ಕಾಲ. ಅದರಲ್ಲೂ ಅಕ್ಟೋಬರ್‍ನಿಂದ ಡಿಸೆಂಬರ್‍ವರೆಗೆ ಯಥೇಚ್ಛವಾಗಿ ಮೀನುಗಳು ಸಿಗುವ ಸಮಯ. ಆದರೆ ಈ ಅವಧಿಯಲ್ಲೇ ಮತ್ಸಕ್ಷಾಮ ಎದುರಾಗಿರುವುದು ಮೀನುಗಾರರಲ್ಲಿ ಮಾತ್ರವಲ್ಲದೆ, ಮೀನುಗಾರಿಕೆಯನ್ನು ಅವಲಂಬಿಸಿರುವ ಸಾವಿರಾರು ಕುಟುಂಬಗಳನ್ನು ಆತಂಕಕ್ಕೆ ತಳ್ಳಿದೆ.

ಮಂಜುಗಡ್ಡೆ ಸಮಸ್ಯೆ : ಈ ಬಾರಿಯ ಮೀನುಗಾರಿಕಾ ಋತು ಆರಂಭಗೊಂಡಾಗ ಮೀನುಗಾರರು ಮಂಜುಗಡ್ಡೆ ಸಮಸ್ಯೆಯನ್ನು ಎದುರಿಸಿದ್ದರು. ಸದ್ಯ ಒಂದು ತಿಂಗಳಿನಿಂದ ಬೋಟ್‍ಗಳು ಸಾಕಷ್ಟು ಮೀನು ಸಿಗದೇ ವಾಪಸಾಗುತ್ತಿವೆ. ಅಲ್ಲದೆ ರಪ್ತಾಗುವ ಮಾಂಜಿ, ಅಂಜಲ್, ಮದಿಮಲ್ ಮೀನುಗಳ ಕೊರತೆಯಿಂದ ಮೀನುಗಾರರ ಜೇಬು ತುಂಬುತ್ತಿಲ್ಲ. ಇದರಿಂದ ದೋಣಿಗಳನ್ನು ಸಮುದ್ರಕ್ಕಿಳಿಸಲು ದೋಣಿ ಮಾಲೀಕರು ಹಿಂದೇಟು ಹಾಕುತ್ತಿದ್ದಾರೆ. ಪರಿಣಾಮ ಬೋಟ್‍ಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು ತವರಿನತ್ತ ಮುಖ ಮಾಡಿದ್ದಾರೆ.

Advertisement

ಸೀಸನ್ ಕಾಲದಲ್ಲಿಯೇ ಮತ್ಸ್ಯಕ್ಷಾಮಕ್ಕೆ ಕಾರಣವಾಗಿ ಬೋಟ್‍ಗಳು ಅವಧಿಗೆ ಮುನ್ನವೇ ಲಂಗರು ಹಾಕಿದ್ದು, ಬೋಟ್ ಮಾಲೀಕರು, ಕಾರ್ಮಿಕರನ್ನು ಕಂಗೆಡಿಸುವಂತೆ ಮಾಡಿದೆ. ಮೀನುಗಾರಿಕೆಯನ್ನೇ ನಂಬಿ ಜೀವನ ಮಾಡುತ್ತಿದ್ದ ಕಡಲ ಮಕ್ಕಳು ಅತಂತ್ರರಾಗಿದ್ದಾರೆ. ಕರಾವಳಿಯ ಆರ್ಥಿಕತೆಯ ಜೀವನಾಡಿಯಾದ ಮತ್ಸ್ಯೋದ್ಯಮವೇ ಕುಸಿದಿದ್ದು ಸರಕಾರ ನೆರವಿಗೆ ಬರಬೇಕಾಗಿದೆ.

here is a threat of fish famine in the coastal ocean. Unable to cover the cost of fishing, the boats have started anchoring at the seashore before the season. Persin boats are not entering the sea for the last one month. The main reason for the fish famine is the recent weather extremes.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

3 hours ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ…

10 hours ago

ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

10 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

13 hours ago