Advertisement
ಸುದ್ದಿಗಳು

#titanicsubmarine | ಅವಶೇಷ ನೋಡಲು ಹೋಗಿ ಸಾವಿನ ಮನೆ ಸೇರಿದ ಐವರು ಉದ್ಯಮಿಗಳು | ಅಮೆರಿಕಾ ಕೋಸ್ಟ್ ಗಾರ್ಡ್ ಸ್ಪಷ್ಟನೆ |

Share

ಇದನ್ನು ಗಟ್ಟಿತನ, ಧೈರ್ಯ ಅನ್ನಬೇಕೋ, ಹವ್ಯಾಸ ಅಂತ ಹೇಳಬೇಕೋ, ಅಥವಾ ಹುಚ್ಚುತನ, ದುಡ್ಡಿನ ಮದ ಅನ್ನಬೇಕೋ ಏನುಂತ ಗೊತ್ತಾಗುತ್ತಿಲ್ಲ. ಆದ್ರೆ ಹೋದ ಪ್ರಾಣ ಮತ್ತೆ ಬರಲ್ಲ. ಇವರನ್ನೇ ನಂಬಿದ್ದ ಜನ, ಕುಟುಂಬ ಈಗ ಪರಿತಪಿಸುವಂತಾಗಿದೆ.

ವಿಶ್ವವಿಖ್ಯಾತ ಟೈಟಾನಿಕ್ ಹಡಗು #TitanicShip ಮುಳುಗಿದ ಸ್ಥಳದಲ್ಲಿ ಅದರ ಅವಶೇಷ  ನೋಡಲು ತೆರಳಿದ್ದ ಐವರು ಮೃತಪಟ್ಟಿರುವ ಬಗ್ಗೆ ಇದೀಗ ಅಧಿಕೃತ ಮಾಹಿತಿ ಹೊರಬಿದ್ದಿದೆ. ಅಟ್ಲಾಂಟಿಕ್ ಸಾಗರದಲ್ಲಿ ಮುಳುಗಿದ್ದ ಟೈಟಾನಿಕ್ ಹಡಗಿನ ಅವಶೇಷಗಳನ್ನ ನೋಡಲು ಸಣ್ಣ ಜಲಾಂತರ್ಗಾಮಿಯಲ್ಲಿ ಐವರು ತೆರಳಿದ್ದರು. ಈ ವೇಳೆ ಸ್ಛೋಟಗೊಂಡು ಐವರು ನಾಪತ್ತೆಯಾಗಿದ್ದರು. ಇದೀಗ ಈ ಐವರು ಮೃತಪಟ್ಟಿರುವುದಾಗಿ ಅಮೆರಿಕಾ ಕೋಸ್ಟ್ ಗಾರ್ಡ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

ಟೈಟಾನಿಕ್ ಅವಶೇಷ ನೋಡಲು ತೆರಳಿದ್ದ ಐವರೂ ಸಾವು ;ಉತ್ತರ ಅಟ್ಲಾಂಟಿಕ್ ಸಾಗರದ ಮೇಲ್ಮೈಯಿಂದ 3,800 ಮೀಟರ್‌ಗಳಷ್ಟು ಕೆಳಗಿರುವ ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ಐವರು ಬಿಲಿಯನೇರ್‌ ಉದ್ಯಮಿಗಳು ಮತ್ತು ಪರಿಶೋಧಕರು ತೆರಳಿದ್ದರು. ಆದರೆ ಅವರೆಲ್ಲ ಮಿಸ್ ಆಗಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಅವರೆಲ್ಲ ಸಾವನ್ನಪ್ಪಿದ್ದಾರೆ ಅಂತ ಅಮೆರಿಕಾ  ಕೋಸ್ಟ್ ಗಾರ್ಡ್ ಮಾಹಿತಿ ನೀಡಿದೆ. ಓಷನ್‌ಗೇಟ್ ಎಕ್ಸ್‌ಪೆಡಿಶನ್ಸ್ ನಿರ್ವಹಿಸುವ ಟೈಟಾನ್ ಸಬ್‌ಮರ್ಸಿಬಲ್ ಅಟ್ಲಾಂಟಿಕ್ ಸಾಗರದಲ್ಲಿ ಸ್ಫೋಟಗೊಂಡಿದೆ ಎಂದು ತಿಳಿಸಿದೆ.

ಈ ಐವರು ಬ್ರಿಟನ್ ಹಾಗೂ ಪಾಕಿಸ್ತಾನದ ಉದ್ಯಮಿಗಳು ಎನ್ನಲಾಗಿದೆ. ಬಿಲಿಯನೇರ್ ಮತ್ತು ಅನ್ವೇಷಕರಾಗಿದ್ದ ಹಮೀಶ್ ಹಾರ್ಡಿಂಗ್​, ಫ್ರೆಂಚ್ ಪರಿಶೋಧಕ ಪಾಲ್ ಹೆನ್ರಿ ನರ್ಜಿಯೊಲೆಟ್ ಹಾಗೂ ಪ್ರಮುಖ ಪಾಕಿಸ್ತಾನಿ ಕುಟುಂಬದ ಸದಸ್ಯರಾದ ಶಹಜಾದಾ ದಾವೂದ್ ಮತ್ತು ಅವನ ಮಗ ಸುಲೇಮಾನ್ ದಾವೂದ್ ಮತ್ತು  ಓಷಿಯನ್‌ಗೇಟ್ ಎಕ್ಸ್‌ಪೆಡಿಷನ್ ಸಿಎಒ ಎಂದು ತಿಳಿದುಬಂದಿದೆ.

ಟೈಟಾನಿಕ್ ಹಡಗಿನ ಅವಶೇಷಗಳನ್ನ ನೋಡಲು ಸಣ್ಣ ಜಲಾಂತರ್ಗಾಮಿ ಅಟ್ಲಾಂಟಿಕ್ ಸಾಗರದಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿತ್ತು. ಇದಕ್ಕೆ ಯುಎಸ್ ಕೋಸ್ಟ್ ಗಾರ್ಡ್ ಸಿಬ್ಬಂದಿ ತೀವ್ರವಾಗಿ ಹುಡುಕಾಟ ನಡೆಸಿದ್ದರು. 96 ತಾಸು ಸಾಗರದಲ್ಲಿ ಸಂಚರಿಸುವಷ್ಟು ಆಮ್ಲಜನಕವನ್ನಷ್ಟೇ ಅದು ಹೊಂದಿತ್ತು.

ಜಲಂತರ್ಗಾಮಿ ನಾಪತ್ತೆಯಾದ ಕ್ಷಣದಿಂದ ಅಂದರೆ ಕಳೆದ 3-4 ದಿನದಿಂದ ಅಮೆರಿಕ ಹಾಗೂ ಕೆನಡಾ ಕರಾವಳಿಯಲ್ಲಿ ನಿರಂತರವಾಗಿ ಅವರನ್ನು ಹುಡುಕುವ ಪ್ರಯತ್ನ ಮಾಡಲಾಗಿತ್ತು. ಆದರೆ ಅವರ ಪತ್ತೆಯೇ ಆಗಿರಲಿಲ್ಲ. ನಾಪತ್ತೆಯಾದ ಜಲಾಂತರ್ಗಾಮಿಯಲ್ಲಿ ನಿನ್ನೆ ಸಂಜೆ 7.15ರ ತನಕ ಸಾಕಾಗುವಷ್ಟು ಮಾತ್ರ ಆಮ್ಲಜನಕ ಬಾಕಿ ಇತ್ತು.

1912ರಲ್ಲಿ ಮುಳುಗಿದ್ದ ವಿಶ್ವವಿಖ್ಯಾತ ಟೈಟಾನಿಕ್ ಹಡಗು ;ವಿಶ್ವವಿಖ್ಯಾತ ಟೈಟಾನಿಕ್ ಹಡಗು 1912ರಲ್ಲಿ ತನ್ನ ಮೊದಲ ಪ್ರಯಾಣದಲ್ಲೇ ಮಂಜುಗಡ್ಡೆಗೆ ಡಿಕ್ಕಿ ಹೊಡೆದು ಅಟ್ಲಾಂಟಿಕ್ ಮಹಾ ಸಾಗರದಲ್ಲಿ ಮುಳುಗಿತ್ತು. ಈ ದುರಂತದಲ್ಲಿ 1,500ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಈ ಹಡಗಿನ ಅವಶೇಷವನ್ನು 1985ರಲ್ಲಿ ಕಂಡುಹಿಡಿಯಲಾಯಿತು. ಇದೀ ಹೆಸರಲ್ಲಿ ಸಿನಿಮಾ ನಿರ್ಮಾಣವಾಗಿ, ಜಗತ್ತಿನಾದ್ಯಂತ ಜನಪ್ರಿಯವಾಗಿದ್ದು ಈಗ ಇತಿಹಾಸ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

9 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

23 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

24 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

24 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

24 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

1 day ago