ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

June 11, 2026
6:56 PM
ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರಸ್ತೆ ಡಿವೈಡರ್‌ಗಳ ಮೇಲಿನ ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌ ಹಾಗೂ ಬಂಟಿಂಗ್‌ಗಳನ್ನು ತುರ್ತಾಗಿ ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ರಸ್ತೆ ಡಿವೈಡರ್‌ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಫ್ಲೆಕ್ಸ್‌, ಬ್ಯಾನರ್‌ ಮತ್ತು ಬಂಟಿಂಗ್‌ಗಳನ್ನು ತುರ್ತಾಗಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಮಳೆ ಮತ್ತು ಬಿರುಗಾಳಿಯ ಪರಿಣಾಮವಾಗಿ ರಸ್ತೆಗಳ ಮಧ್ಯದ ಡಿವೈಡರ್‌ಗಳಿಗೆ ಅಳವಡಿಸಿರುವ ಫ್ಲೆಕ್ಸ್‌, ಬ್ಯಾನರ್‌ಗಳು ಕಳಚಿ ವಾಹನಗಳು ಹಾಗೂ ಪಾದಚಾರಿಗಳ ಮೇಲೆ ಬೀಳುವ ಸಾಧ್ಯತೆ ಇದ್ದು, ಇದರಿಂದ ಅಪಘಾತಗಳು ಮತ್ತು ಜೀವಹಾನಿ ಸಂಭವಿಸುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳಿಗೆ ವಿಶೇಷ ಸೂಚನೆ ನೀಡಲಾಗಿದೆ.

ಜಿಲ್ಲೆಯ ವ್ಯಾಪ್ತಿಯಲ್ಲಿರುವ ಎಲ್ಲಾ ರಸ್ತೆಗಳಲ್ಲಿ, ವಿಶೇಷವಾಗಿ ಡಿವೈಡರ್‌ಗಳಿಗೆ ಅಳವಡಿಸಿರುವ ಅಪಾಯಕಾರಿ ಹಾಗೂ ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌ ಮತ್ತು ಬಂಟಿಂಗ್‌ಗಳನ್ನು ಮೊದಲ ಆದ್ಯತೆಯ ಮೇರೆಗೆ ತೆರವುಗೊಳಿಸಬೇಕು. ಕೈಗೊಂಡ ಕ್ರಮಗಳ ಕುರಿತು ಛಾಯಾಚಿತ್ರ ಸಮೇತ ವರದಿಯನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮುಂದಿನ ದಿನಗಳಲ್ಲಿಯೂ ರಸ್ತೆಗಳ ಮಧ್ಯದ ಡಿವೈಡರ್‌ಗಳಿಗೆ ಯಾವುದೇ ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌ ಹಾಗೂ ಬಂಟಿಂಗ್‌ಗಳನ್ನು ಅಳವಡಿಸದಂತೆ ಕ್ರಮ ಕೈಗೊಳ್ಳಬೇಕು. ನಿಯಮ ಉಲ್ಲಂಘಿಸಿ ಅಳವಡಿಸಿದಲ್ಲಿ ತಕ್ಷಣ ತೆರವುಗೊಳಿಸಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆದೇಶಿಸಲಾಗಿದೆ.

ಈ ಆದೇಶದ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಅಥವಾ ವಿಳಂಬ ಕಂಡುಬಂದಲ್ಲಿ, ಅಥವಾ ಯಾವುದೇ ಅಪಘಾತ ಸಂಭವಿಸಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಪರಿಗಣಿಸಿ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಇತರೆ ಅನ್ವಯಿಸುವ ನಿಯಮಗಳಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Dakshina Kannada Deputy Commissioner has directed all local bodies and gram panchayats to immediately remove unauthorized flex boards, banners and buntings installed on road dividers. The move aims to prevent accidents and loss of life during the ongoing monsoon season due to strong winds and heavy rains.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror