MIRROR FOCUS

ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ| ಅತಿವೃಷ್ಟಿ ಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ – ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಹಿಂಗಾರು ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅದನ್ನು ಸಮರ್ಪಕವಾಗಿ ಬಳಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾನಿಯಾದ ಸ್ಥಳಗಳಿಗೆ ಭೇಟಿ ನೀಡಿ ಮನೆ ಹಾನಿ ಮತ್ತು ಪ್ರಾಣಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

Advertisement
Advertisement

ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿ ಅಕಾರಿಗಳೊಂದಿಗೆ  ನಡೆಸಿದ ಪರಿಶೀಲನಾ ಸಭೆಯಲ್ಲಿ ಅವರು ಈ ಬಗ್ಗೆ ಆದೇಶ ನೀಡಿದ್ದಾರೆ. ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಸುಮಾರು 551 ಕೋಟಿ ರೂಪಾಯಿ ತಹಶೀಲ್ದಾರ್ ಖಾತೆಯಲ್ಲಿ ಸುಮಾರು 116 ಕೋಟಿ ಸೇರಿದಂತೆ ಒಟ್ಟು 666 ಕೋಟಿಗೂ ಅಧಿಕ ಹಣ ಲಭ್ಯವಿದೆ ಎಂದು ತಿಳಿಸಿದರು.

ಜಿಲ್ಲಾ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಅತಿವೃಷ್ಟಿ ಪ್ರದೇಶಕ್ಕೆ ಸ್ವತಃ ಭೇಟಿ ನೀಡಿ, ಜನರಿಗೆ ಸಾಂತ್ವನ ನೀಡುವ ಕಾರ್ಯ ಮಾಡಬೇಕು ಎಂದು ತಿಳಿಸಿದ್ದಾಗಿ ಮುಖ್ಯಮಂತ್ರಿ ಹೇಳಿದರು. ಈ ಬಾರಿ ಜಲವಿದ್ಯುತ್ ಉತ್ಪಾದನೆಗೆ ಉತ್ತಮ ಪ್ರಮಾಣದ ನೀರು ಲಭ್ಯವಿದೆ. ಕಾವೇರಿ ಹಾಗೂ ಕೃಷ್ಣ ಕಣಿವೆಗಳಲ್ಲೂ ಉತ್ತಮ ನೀರು ಸಂಗ್ರಹವಿದೆ. ಕುಡಿಯುವ ನೀರಿಗೆ ಸಾಕಷ್ಟು ನೀರನ್ನು ಇಟ್ಟುಕೊಂಡು ನೀರಾವರಿಗೆ ಸಮಪರ್ಕವಾಗಿ ಬಳಸಿಕೊಳ್ಳಬೇಕೆಂದು ತಿಳಿಸಿದರು.

ಕೆರೆಗಳ ಒತ್ತುವರಿ ತೆರವುಗೊಳಿಸುವುದು ಮತ್ತು ಕೆರೆಗಳ ಹೂಳೆತ್ತುವ ಕೆಲಸಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಯವರು ಸೂಚನೆ ನೀಡಿದರು. ದೀಪಾವಳಿ ಸಂದರ್ಭದಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪಟಾಕಿ ದಾಸ್ತಾನು ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಮುಖ್ಯಮಂತ್ರಿಯವರು  ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದರು.

ಕೃಷಿ ಸಚಿವ ಚಲುವರಾಯಸ್ವಾಮಿ, ಕಂದಾಯ ಸಚಿವ, ಕೃಷ್ಣಬೈರೇಗೌಡ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಾರ್ಮಿಕ ಖಾತೆ ಸಚಿವ ಸಂತೋಷ್ ಲಾಡ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

10 minutes ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

5 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

7 hours ago

ಜೂನ್ 22 ರಂದು 6 ಗ್ರಹಗಳ ಮಹಾಗೋಚಾರ | 12 ರಾಶಿಗಳ ಮೇಲೆ ಹೇಗಿರಲಿದೆ ಪ್ರಭಾವ..?

ಜೂನ್ 22, 2025 ರಂದು  6 ಗ್ರಹಗಳ ಮಹಾಗೋಚಾರ, ಸೂರ್ಯ, ಚಂದ್ರ, ಬುಧ,…

8 hours ago

ಹೊಸರುಚಿ | ಹಲಸಿನ ಕಾಯಿ ಐಸ್ ಕ್ರೀಮ್

ಐಸ್ ಕ್ರೀಮ್ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ಬೇಕು. ಹಲಸಿನ ಹಣ್ಣಿನ…

8 hours ago

ಸಸ್ಯ ಪರಿಚಯ | ಕರ್ಲೆಂಕಿ

ಅಚ್ಚ ಹಸುರಿನ ಉರುಟುರುಟಾದ ರೂಪಾಯಿ ನಾಣ್ಯದಷ್ಟು ಗಾತ್ರದ ಎಲೆಗಳ ದಂಟುಗಳನ್ನು ಹೊಂದಿರುವ ಗಿಡ…

16 hours ago