Advertisement
MIRROR FOCUS

ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ| ಅತಿವೃಷ್ಟಿ ಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ – ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Share

ರಾಜ್ಯದಲ್ಲಿ ಹಿಂಗಾರು ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅದನ್ನು ಸಮರ್ಪಕವಾಗಿ ಬಳಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾನಿಯಾದ ಸ್ಥಳಗಳಿಗೆ ಭೇಟಿ ನೀಡಿ ಮನೆ ಹಾನಿ ಮತ್ತು ಪ್ರಾಣಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿ ಅಕಾರಿಗಳೊಂದಿಗೆ  ನಡೆಸಿದ ಪರಿಶೀಲನಾ ಸಭೆಯಲ್ಲಿ ಅವರು ಈ ಬಗ್ಗೆ ಆದೇಶ ನೀಡಿದ್ದಾರೆ. ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಸುಮಾರು 551 ಕೋಟಿ ರೂಪಾಯಿ ತಹಶೀಲ್ದಾರ್ ಖಾತೆಯಲ್ಲಿ ಸುಮಾರು 116 ಕೋಟಿ ಸೇರಿದಂತೆ ಒಟ್ಟು 666 ಕೋಟಿಗೂ ಅಧಿಕ ಹಣ ಲಭ್ಯವಿದೆ ಎಂದು ತಿಳಿಸಿದರು.

ಜಿಲ್ಲಾ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಅತಿವೃಷ್ಟಿ ಪ್ರದೇಶಕ್ಕೆ ಸ್ವತಃ ಭೇಟಿ ನೀಡಿ, ಜನರಿಗೆ ಸಾಂತ್ವನ ನೀಡುವ ಕಾರ್ಯ ಮಾಡಬೇಕು ಎಂದು ತಿಳಿಸಿದ್ದಾಗಿ ಮುಖ್ಯಮಂತ್ರಿ ಹೇಳಿದರು. ಈ ಬಾರಿ ಜಲವಿದ್ಯುತ್ ಉತ್ಪಾದನೆಗೆ ಉತ್ತಮ ಪ್ರಮಾಣದ ನೀರು ಲಭ್ಯವಿದೆ. ಕಾವೇರಿ ಹಾಗೂ ಕೃಷ್ಣ ಕಣಿವೆಗಳಲ್ಲೂ ಉತ್ತಮ ನೀರು ಸಂಗ್ರಹವಿದೆ. ಕುಡಿಯುವ ನೀರಿಗೆ ಸಾಕಷ್ಟು ನೀರನ್ನು ಇಟ್ಟುಕೊಂಡು ನೀರಾವರಿಗೆ ಸಮಪರ್ಕವಾಗಿ ಬಳಸಿಕೊಳ್ಳಬೇಕೆಂದು ತಿಳಿಸಿದರು.

ಕೆರೆಗಳ ಒತ್ತುವರಿ ತೆರವುಗೊಳಿಸುವುದು ಮತ್ತು ಕೆರೆಗಳ ಹೂಳೆತ್ತುವ ಕೆಲಸಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಯವರು ಸೂಚನೆ ನೀಡಿದರು. ದೀಪಾವಳಿ ಸಂದರ್ಭದಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪಟಾಕಿ ದಾಸ್ತಾನು ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಮುಖ್ಯಮಂತ್ರಿಯವರು  ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದರು.

ಕೃಷಿ ಸಚಿವ ಚಲುವರಾಯಸ್ವಾಮಿ, ಕಂದಾಯ ಸಚಿವ, ಕೃಷ್ಣಬೈರೇಗೌಡ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಾರ್ಮಿಕ ಖಾತೆ ಸಚಿವ ಸಂತೋಷ್ ಲಾಡ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

4 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

7 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

12 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

19 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

19 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago