ಕಳೆದ ಮೂರು ದಿನಗಳಿಂದ ಉತ್ತರ ಭಾರತದಲ್ಲಿ ತೀವ್ರ ಮಳೆಯಿಂದಾಗಿ ಹಾಗೂ ಹಠಾತ್ ಪ್ರವಾಹದಲ್ಲಿ ಕನಿಷ್ಠ 40 ಜನರು ಮೃತಪಟ್ಟಿದ್ದಾರೆ ಹಾಗೂ ಹಲವು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಕೆಲವು ಭಾಗಗಳಲ್ಲಿಭಾರೀ ಮಳೆಯಿಂದಾಗಿ ಹಳ್ಳಿಗಳು ಜಲಾವೃತವಾಗಿದೆ. ಮನೆಗಳು ಧರೆಗೆ ಉರುಳಿದೆ. ರಸ್ತೆಗಳು ಕೊಚ್ಚಿ ಹೋಗಿ ಸಂಪರ್ಕ ಕಡಿತಗೊಂಡಿದೆ. ಅಲ್ಲಲ್ಲಿ ಭೂಕುಸಿತ ಉಂಟಾಗಿದೆ. ಈ ನಡುವೆ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಹಿಮಾಚಲ ಪ್ರದೇಶ ಒಂದರಲ್ಲೇ 13 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
ರಾಜಸ್ಥಾನದಲ್ಲೂ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳು ಮತ್ತು ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಹಲವು ಕಡೆ ಜಲಾವೃತಗೊಂಡಿದೆ.
ಒಡಿಶಾದ ಉತ್ತರದ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ತೆರವು ಕಾರ್ಯ ನಡೆಯುತ್ತಿದೆ. ಉತ್ತರ ಒಡಿಶಾದ ಹಲವಾರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಕಂಡುಬಂದಿದೆ. 100 ಕ್ಕೂ ಹೆಚ್ಚು ಹಳ್ಳಿಗಳ ಜನರನ್ನು ಸ್ಥಳಾಂತರಕ್ಕೆ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಗುಜರಾತ್ನ ಕೆಲವು ಭಾಗಗಳಲ್ಲಿ ಆಗಸ್ಟ್ 24 ರವರೆಗೆ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಆಗಸ್ಟ್ 24 ರಂದು ಕಛ್ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಬುಲೆಟಿನ್ ತಿಳಿಸಿದೆ.
ಮಧ್ಯಪ್ರದೇಶದ ಹಲವು ಭಾಗಗಳಲ್ಲಿ ಸೋಮವಾರ ಮೂರನೇ ದಿನವೂ ಭಾರೀ ಮಳೆ ಮುಂದುವರಿದಿದ್ದು, ರಾಜ್ಯದ ರಾಜಧಾನಿ ಭೋಪಾಲ್ ಮತ್ತು ಜಬಲ್ಪುರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಸಾರಲಾಗಿತ್ತು.
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…