ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ | ಮೃತರ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ | 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ |

May 10, 2024
1:10 PM

ಎಲ್‌ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ 15 ದಿನಗಳಿಂದೀಚೆಗೆ ಅಲ್ಲಲ್ಲಿ ಮಳೆ ಆರಂಭವಾಗಿದೆ. ವಿಶ್ವದ ಕೆಲ ಭಾಗಗಳಲ್ಲಿ ಬರ ಇದ್ರೂ ಇನ್ನೂ ಕೆಲವೆಡೆ ಪ್ರವಾಹದ ಭೀತಿ ಎದುರಾಗಿದೆ. ದಕ್ಷಿಣ ಬ್ರೇಜಿಲ್ ನಲ್ಲಿ ಭಾರೀ ಮಳೆಗೆ ಪ್ರವಾಹವೇ (Brazil Floods) ಉಂಟಾಗಿದೆ. ಪ್ರವಾಹದ ತೀವ್ರತೆಗೆ ಮೃತರ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಬ್ರೆಜಿಲ್‌ನ ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಉಂಟಾದ ಪ್ರವಾಹಕ್ಕೆ ಸಿಕ್ಕಿ ಸುಮಾರು 105 ಮಂದಿ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1,15,000ಕ್ಕೂ ಹೆಚ್ಚು ಜನ ಸ್ಥಳಾಂತರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. 3,000ಕ್ಕೂ ಹೆಚ್ಚು ಸೈನಿಕರು (Rescue Official), ಅಗ್ನಿಶಾಮಕ ಸಿಬ್ಬಂದಿ ಮತ್ತು ಇತರ ರಕ್ಷಕರಿಂದ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ನೀರು, ವಿದ್ಯುತ್ ಇಲ್ಲದೆ ಮನೆಗಳಲ್ಲಿ ಸಿಲುಕಿರುವ ಜನರ ರಕ್ಷಣೆ ಮಾಡಲಾಗುತ್ತಿದೆ. ಇದರೊಂದಿಗೆ ಸೇನಾ ಆಸ್ಪತ್ರೆ ಸ್ಥಾಪಿಸಿ ಜನರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರವಾಹದಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿ ರಸ್ತೆಗಳು ಬಂದ್‌ ಆಗಿವೆ. ರಿಯೊ ಗ್ರಾಂಡೆ ಡೊ ಸುಲ್ ಹೆಚ್ಚು ಪರಿಣಾಮ ಬೀರಿದೆ. ಈ ನಡುವೆ ಡಾಟ್‌ಕಾಂ ಎಂಬ ಕಂಪನಿಯ ಕಟ್ಟಡದಲ್ಲಿ ಕೆಲವರು ಸಿಲುಕಿಕೊಂಡು ಸಮಸ್ಯೆಗೀಡಾಗಿದ್ದಾರೆ. ಕಟ್ಟಡದಲ್ಲಿರುವ ಕೆಲವರು, ಮಕ್ಕಳು ಹಸಿವಿನಿಂದ ಬಳಲುತ್ತಿದ್ದಾರೆ. ದುರಂತದ ಹವಾಮಾನ ಘಟನೆಯ ನಂತರ ಈ ಪ್ರದೇಶದಲ್ಲಿ ಗವರ್ನರ್ ಎಡ್ವರ್ಡೊ ಲೀಟ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.

Advertisement

Source :PTI

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror