ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ | ಮೃತರ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ | 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ |

May 10, 2024
1:10 PM

ಎಲ್‌ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ 15 ದಿನಗಳಿಂದೀಚೆಗೆ ಅಲ್ಲಲ್ಲಿ ಮಳೆ ಆರಂಭವಾಗಿದೆ. ವಿಶ್ವದ ಕೆಲ ಭಾಗಗಳಲ್ಲಿ ಬರ ಇದ್ರೂ ಇನ್ನೂ ಕೆಲವೆಡೆ ಪ್ರವಾಹದ ಭೀತಿ ಎದುರಾಗಿದೆ. ದಕ್ಷಿಣ ಬ್ರೇಜಿಲ್ ನಲ್ಲಿ ಭಾರೀ ಮಳೆಗೆ ಪ್ರವಾಹವೇ (Brazil Floods) ಉಂಟಾಗಿದೆ. ಪ್ರವಾಹದ ತೀವ್ರತೆಗೆ ಮೃತರ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಬ್ರೆಜಿಲ್‌ನ ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಉಂಟಾದ ಪ್ರವಾಹಕ್ಕೆ ಸಿಕ್ಕಿ ಸುಮಾರು 105 ಮಂದಿ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1,15,000ಕ್ಕೂ ಹೆಚ್ಚು ಜನ ಸ್ಥಳಾಂತರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. 3,000ಕ್ಕೂ ಹೆಚ್ಚು ಸೈನಿಕರು (Rescue Official), ಅಗ್ನಿಶಾಮಕ ಸಿಬ್ಬಂದಿ ಮತ್ತು ಇತರ ರಕ್ಷಕರಿಂದ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ನೀರು, ವಿದ್ಯುತ್ ಇಲ್ಲದೆ ಮನೆಗಳಲ್ಲಿ ಸಿಲುಕಿರುವ ಜನರ ರಕ್ಷಣೆ ಮಾಡಲಾಗುತ್ತಿದೆ. ಇದರೊಂದಿಗೆ ಸೇನಾ ಆಸ್ಪತ್ರೆ ಸ್ಥಾಪಿಸಿ ಜನರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರವಾಹದಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿ ರಸ್ತೆಗಳು ಬಂದ್‌ ಆಗಿವೆ. ರಿಯೊ ಗ್ರಾಂಡೆ ಡೊ ಸುಲ್ ಹೆಚ್ಚು ಪರಿಣಾಮ ಬೀರಿದೆ. ಈ ನಡುವೆ ಡಾಟ್‌ಕಾಂ ಎಂಬ ಕಂಪನಿಯ ಕಟ್ಟಡದಲ್ಲಿ ಕೆಲವರು ಸಿಲುಕಿಕೊಂಡು ಸಮಸ್ಯೆಗೀಡಾಗಿದ್ದಾರೆ. ಕಟ್ಟಡದಲ್ಲಿರುವ ಕೆಲವರು, ಮಕ್ಕಳು ಹಸಿವಿನಿಂದ ಬಳಲುತ್ತಿದ್ದಾರೆ. ದುರಂತದ ಹವಾಮಾನ ಘಟನೆಯ ನಂತರ ಈ ಪ್ರದೇಶದಲ್ಲಿ ಗವರ್ನರ್ ಎಡ್ವರ್ಡೊ ಲೀಟ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.

Source :PTI

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror