Advertisement
MIRROR FOCUS

ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ | ಮೃತರ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ | 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ |

Share

ಎಲ್‌ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ 15 ದಿನಗಳಿಂದೀಚೆಗೆ ಅಲ್ಲಲ್ಲಿ ಮಳೆ ಆರಂಭವಾಗಿದೆ. ವಿಶ್ವದ ಕೆಲ ಭಾಗಗಳಲ್ಲಿ ಬರ ಇದ್ರೂ ಇನ್ನೂ ಕೆಲವೆಡೆ ಪ್ರವಾಹದ ಭೀತಿ ಎದುರಾಗಿದೆ. ದಕ್ಷಿಣ ಬ್ರೇಜಿಲ್ ನಲ್ಲಿ ಭಾರೀ ಮಳೆಗೆ ಪ್ರವಾಹವೇ (Brazil Floods) ಉಂಟಾಗಿದೆ. ಪ್ರವಾಹದ ತೀವ್ರತೆಗೆ ಮೃತರ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಬ್ರೆಜಿಲ್‌ನ ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಉಂಟಾದ ಪ್ರವಾಹಕ್ಕೆ ಸಿಕ್ಕಿ ಸುಮಾರು 105 ಮಂದಿ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1,15,000ಕ್ಕೂ ಹೆಚ್ಚು ಜನ ಸ್ಥಳಾಂತರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. 3,000ಕ್ಕೂ ಹೆಚ್ಚು ಸೈನಿಕರು (Rescue Official), ಅಗ್ನಿಶಾಮಕ ಸಿಬ್ಬಂದಿ ಮತ್ತು ಇತರ ರಕ್ಷಕರಿಂದ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ನೀರು, ವಿದ್ಯುತ್ ಇಲ್ಲದೆ ಮನೆಗಳಲ್ಲಿ ಸಿಲುಕಿರುವ ಜನರ ರಕ್ಷಣೆ ಮಾಡಲಾಗುತ್ತಿದೆ. ಇದರೊಂದಿಗೆ ಸೇನಾ ಆಸ್ಪತ್ರೆ ಸ್ಥಾಪಿಸಿ ಜನರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರವಾಹದಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿ ರಸ್ತೆಗಳು ಬಂದ್‌ ಆಗಿವೆ. ರಿಯೊ ಗ್ರಾಂಡೆ ಡೊ ಸುಲ್ ಹೆಚ್ಚು ಪರಿಣಾಮ ಬೀರಿದೆ. ಈ ನಡುವೆ ಡಾಟ್‌ಕಾಂ ಎಂಬ ಕಂಪನಿಯ ಕಟ್ಟಡದಲ್ಲಿ ಕೆಲವರು ಸಿಲುಕಿಕೊಂಡು ಸಮಸ್ಯೆಗೀಡಾಗಿದ್ದಾರೆ. ಕಟ್ಟಡದಲ್ಲಿರುವ ಕೆಲವರು, ಮಕ್ಕಳು ಹಸಿವಿನಿಂದ ಬಳಲುತ್ತಿದ್ದಾರೆ. ದುರಂತದ ಹವಾಮಾನ ಘಟನೆಯ ನಂತರ ಈ ಪ್ರದೇಶದಲ್ಲಿ ಗವರ್ನರ್ ಎಡ್ವರ್ಡೊ ಲೀಟ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.

Advertisement

Source :PTI

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

7 hours ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

7 hours ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

9 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

10 hours ago

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

15 hours ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

3 days ago