Advertisement
MIRROR FOCUS

ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ | ಮೃತರ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ | 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ |

Share

ಎಲ್‌ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ 15 ದಿನಗಳಿಂದೀಚೆಗೆ ಅಲ್ಲಲ್ಲಿ ಮಳೆ ಆರಂಭವಾಗಿದೆ. ವಿಶ್ವದ ಕೆಲ ಭಾಗಗಳಲ್ಲಿ ಬರ ಇದ್ರೂ ಇನ್ನೂ ಕೆಲವೆಡೆ ಪ್ರವಾಹದ ಭೀತಿ ಎದುರಾಗಿದೆ. ದಕ್ಷಿಣ ಬ್ರೇಜಿಲ್ ನಲ್ಲಿ ಭಾರೀ ಮಳೆಗೆ ಪ್ರವಾಹವೇ (Brazil Floods) ಉಂಟಾಗಿದೆ. ಪ್ರವಾಹದ ತೀವ್ರತೆಗೆ ಮೃತರ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಬ್ರೆಜಿಲ್‌ನ ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಉಂಟಾದ ಪ್ರವಾಹಕ್ಕೆ ಸಿಕ್ಕಿ ಸುಮಾರು 105 ಮಂದಿ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1,15,000ಕ್ಕೂ ಹೆಚ್ಚು ಜನ ಸ್ಥಳಾಂತರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. 3,000ಕ್ಕೂ ಹೆಚ್ಚು ಸೈನಿಕರು (Rescue Official), ಅಗ್ನಿಶಾಮಕ ಸಿಬ್ಬಂದಿ ಮತ್ತು ಇತರ ರಕ್ಷಕರಿಂದ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ನೀರು, ವಿದ್ಯುತ್ ಇಲ್ಲದೆ ಮನೆಗಳಲ್ಲಿ ಸಿಲುಕಿರುವ ಜನರ ರಕ್ಷಣೆ ಮಾಡಲಾಗುತ್ತಿದೆ. ಇದರೊಂದಿಗೆ ಸೇನಾ ಆಸ್ಪತ್ರೆ ಸ್ಥಾಪಿಸಿ ಜನರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರವಾಹದಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿ ರಸ್ತೆಗಳು ಬಂದ್‌ ಆಗಿವೆ. ರಿಯೊ ಗ್ರಾಂಡೆ ಡೊ ಸುಲ್ ಹೆಚ್ಚು ಪರಿಣಾಮ ಬೀರಿದೆ. ಈ ನಡುವೆ ಡಾಟ್‌ಕಾಂ ಎಂಬ ಕಂಪನಿಯ ಕಟ್ಟಡದಲ್ಲಿ ಕೆಲವರು ಸಿಲುಕಿಕೊಂಡು ಸಮಸ್ಯೆಗೀಡಾಗಿದ್ದಾರೆ. ಕಟ್ಟಡದಲ್ಲಿರುವ ಕೆಲವರು, ಮಕ್ಕಳು ಹಸಿವಿನಿಂದ ಬಳಲುತ್ತಿದ್ದಾರೆ. ದುರಂತದ ಹವಾಮಾನ ಘಟನೆಯ ನಂತರ ಈ ಪ್ರದೇಶದಲ್ಲಿ ಗವರ್ನರ್ ಎಡ್ವರ್ಡೊ ಲೀಟ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.

Source :PTI

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

3 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

9 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

17 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

21 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago