Advertisement
MIRROR FOCUS

ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ | ಮೃತರ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ | 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ |

Share

ಎಲ್‌ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ 15 ದಿನಗಳಿಂದೀಚೆಗೆ ಅಲ್ಲಲ್ಲಿ ಮಳೆ ಆರಂಭವಾಗಿದೆ. ವಿಶ್ವದ ಕೆಲ ಭಾಗಗಳಲ್ಲಿ ಬರ ಇದ್ರೂ ಇನ್ನೂ ಕೆಲವೆಡೆ ಪ್ರವಾಹದ ಭೀತಿ ಎದುರಾಗಿದೆ. ದಕ್ಷಿಣ ಬ್ರೇಜಿಲ್ ನಲ್ಲಿ ಭಾರೀ ಮಳೆಗೆ ಪ್ರವಾಹವೇ (Brazil Floods) ಉಂಟಾಗಿದೆ. ಪ್ರವಾಹದ ತೀವ್ರತೆಗೆ ಮೃತರ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಬ್ರೆಜಿಲ್‌ನ ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಉಂಟಾದ ಪ್ರವಾಹಕ್ಕೆ ಸಿಕ್ಕಿ ಸುಮಾರು 105 ಮಂದಿ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1,15,000ಕ್ಕೂ ಹೆಚ್ಚು ಜನ ಸ್ಥಳಾಂತರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. 3,000ಕ್ಕೂ ಹೆಚ್ಚು ಸೈನಿಕರು (Rescue Official), ಅಗ್ನಿಶಾಮಕ ಸಿಬ್ಬಂದಿ ಮತ್ತು ಇತರ ರಕ್ಷಕರಿಂದ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ನೀರು, ವಿದ್ಯುತ್ ಇಲ್ಲದೆ ಮನೆಗಳಲ್ಲಿ ಸಿಲುಕಿರುವ ಜನರ ರಕ್ಷಣೆ ಮಾಡಲಾಗುತ್ತಿದೆ. ಇದರೊಂದಿಗೆ ಸೇನಾ ಆಸ್ಪತ್ರೆ ಸ್ಥಾಪಿಸಿ ಜನರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರವಾಹದಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿ ರಸ್ತೆಗಳು ಬಂದ್‌ ಆಗಿವೆ. ರಿಯೊ ಗ್ರಾಂಡೆ ಡೊ ಸುಲ್ ಹೆಚ್ಚು ಪರಿಣಾಮ ಬೀರಿದೆ. ಈ ನಡುವೆ ಡಾಟ್‌ಕಾಂ ಎಂಬ ಕಂಪನಿಯ ಕಟ್ಟಡದಲ್ಲಿ ಕೆಲವರು ಸಿಲುಕಿಕೊಂಡು ಸಮಸ್ಯೆಗೀಡಾಗಿದ್ದಾರೆ. ಕಟ್ಟಡದಲ್ಲಿರುವ ಕೆಲವರು, ಮಕ್ಕಳು ಹಸಿವಿನಿಂದ ಬಳಲುತ್ತಿದ್ದಾರೆ. ದುರಂತದ ಹವಾಮಾನ ಘಟನೆಯ ನಂತರ ಈ ಪ್ರದೇಶದಲ್ಲಿ ಗವರ್ನರ್ ಎಡ್ವರ್ಡೊ ಲೀಟ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.

Source :PTI

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

5 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

5 hours ago

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

12 hours ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

12 hours ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

12 hours ago