MIRROR FOCUS

ಮೈಸೂರು ಅರಮನೆ ಮುಂಭಾಗದಲ್ಲಿ ಫಲ-ಪುಷ್ಪ ಪ್ರದರ್ಶನ | ಗಮನ ಸೆಳೆಯುತ್ತಿವೆ ಹತ್ತಾರು ಆಕರ್ಷಕ ಕಲಾಕೃತಿಗಳು!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮೈಸೂರು ಅರಮನೆ(Mysore Palace) ಮಂಡಳಿ ವತಿಯಿಂದ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನವನ್ನು(Fruit and Flower Show) ಆಯೋಜಿಸಲಾಗಿದೆ.   ಫಲಪುಷ್ಪ ಪ್ರದರ್ಶನ- 2023 ಕಾರ್ಯಕ್ರಮವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು(CM Siddaramayya) ಉದ್ಘಾಟಿಸಿದ್ದರು. ವಿಶೇಷವಾಗಿ ಹೂವುಗಳಿಂದ ಅನೇಕ  ಆಕೃತಿಗಳನ್ನು ಆಕರ್ಷಕವಾಗಿ ತಯಾರಿಸಿ ಇಡಲಾಗಿದೆ. ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ.

Advertisement

ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಅರಮನೆ ಆವರಣದಲ್ಲಿ ಮಾಗಿ ಉತ್ಸವ ಕಳೆಗಟ್ಟಿದೆ. ಪ್ರದರ್ಶನದಲ್ಲಿ ಜಿಲ್ಲೆಯ ಪ್ರಮುಖ ಆಕರ್ಷಕ ಕೇಂದ್ರಗಳಾದ ಸೋಮನಾಥೇಶ್ವರ ದೇವಾಲಯ, ಸಿರಿ ಧಾನ್ಯದಿಂದ ನಿರ್ಮಿಸಿದ ಮಲೆ ಮಹದೇಶ್ವರ ಪ್ರತಿಮೆ, ಹಂಪಿಯ ಕಲ್ಲಿನ ರಥ, ವಿರೂಪಾಕ್ಷ ವಿಗ್ರಹ, ಬ್ರಾಂಡ್ ಮೈಸೂರು ಲೋಗೋ, 8 ಬಾರಿ ಅಂಬಾರಿ ಹೊತ್ತ ಅರ್ಜುನ ಅನೆ ಆಕೃತಿ, ನಾಲ್ವಡಿ ಕೃಷ್ಣ ರಾಜ ಒಡೆಯರ್, ಕೆಂಪ ನಂಜಮ್ಮಣಿ, ಶ್ರಿ ಕಂತ ದತ್ತ ಒಡೆಯರ್, ಮೈಸೂರು ಅರಮನೆ ಮಂಡಳಿ, ಹಾಗೂ ವಿವಿಧ ರೀತಿಯ ಪ್ರಾಣಿಗಳ ಪ್ರತಿಮೆಗಳು ಕಂಡುಬಂದವು.  ಅದರ ಜತೆಗೆ ಇನ್ನಷ್ಟು ಕಲಾಕೃತಿಗಳು ಕೂಡಾ ಪ್ರವಾಸಿಗರಿಗೆ ಮುದ ನೀಡುತ್ತಿದೆ.

ಸೋಮನಾಥಪುರ ಚನ್ನಕೇಶವ ದೇವಾಲಯವನ್ನು ಕೆಂಗುಲಾಬಿ, ಚೆಂಡು ಹೂ ಹಾಗೂ ವಿವಿಧ ಬಗೆಯ ಗುಲಾಬಿಗಳಿಂದ 50 ಅಡಿ ಅಗಲ, 20 ಅಡಿ ಉದ್ದ, 28 ಅಡಿ ಎತ್ತರದಲ್ಲಿ ನಿರ್ಮಿಸಲಾಗಿದೆ.ಇನ್ನು ಅಂಬೇಡ್ಕರ್‌, ಮಹಾತ್ಮ ಗಾಂಧಿ, ಕಿತ್ತೂರು ರಾಣಿ ಚೆನ್ನಮ್ಮ ಹೂವಿನ ಕಲಾಕೃತಿಗಳು ಭಾರೀ ಆಕರ್ಷಿಸುತ್ತಿವೆ. ಮಕ್ಕಳಿಗಂತೂ ಸ್ಪೈಡರ್‌ ಮ್ಯಾನ್‌, ಬ್ಯಾಟ್‌ ಮ್ಯಾನ್‌, ಸೂಪರ್‌ ಮ್ಯಾನ್‌ ಭಾರೀ ಮುದ ನೀಡುತ್ತಿದೆ. ಹೀಗೆ 4 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಸಿಕೊಂಡು ನೂರಾರು ಕಲಾಕೃತಿಗಳನ್ನು ರಚಿಸಲಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ

ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…

11 hours ago

ಭಾರತ, ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಳ | ವಾಯುಪಡೆಯ ನೆಲೆಯಿಂದ ಎಚ್ಚರಿಕೆ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ  ಸಂಭವನೀಯ ದಾಳಿಯ ಬಗ್ಗೆ…

11 hours ago

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

21 hours ago

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…

23 hours ago

ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…

23 hours ago

ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago