Advertisement
MIRROR FOCUS

ಮೈಸೂರು ಅರಮನೆ ಮುಂಭಾಗದಲ್ಲಿ ಫಲ-ಪುಷ್ಪ ಪ್ರದರ್ಶನ | ಗಮನ ಸೆಳೆಯುತ್ತಿವೆ ಹತ್ತಾರು ಆಕರ್ಷಕ ಕಲಾಕೃತಿಗಳು!

Share

ಮೈಸೂರು ಅರಮನೆ(Mysore Palace) ಮಂಡಳಿ ವತಿಯಿಂದ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನವನ್ನು(Fruit and Flower Show) ಆಯೋಜಿಸಲಾಗಿದೆ.   ಫಲಪುಷ್ಪ ಪ್ರದರ್ಶನ- 2023 ಕಾರ್ಯಕ್ರಮವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು(CM Siddaramayya) ಉದ್ಘಾಟಿಸಿದ್ದರು. ವಿಶೇಷವಾಗಿ ಹೂವುಗಳಿಂದ ಅನೇಕ  ಆಕೃತಿಗಳನ್ನು ಆಕರ್ಷಕವಾಗಿ ತಯಾರಿಸಿ ಇಡಲಾಗಿದೆ. ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ.

ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಅರಮನೆ ಆವರಣದಲ್ಲಿ ಮಾಗಿ ಉತ್ಸವ ಕಳೆಗಟ್ಟಿದೆ. ಪ್ರದರ್ಶನದಲ್ಲಿ ಜಿಲ್ಲೆಯ ಪ್ರಮುಖ ಆಕರ್ಷಕ ಕೇಂದ್ರಗಳಾದ ಸೋಮನಾಥೇಶ್ವರ ದೇವಾಲಯ, ಸಿರಿ ಧಾನ್ಯದಿಂದ ನಿರ್ಮಿಸಿದ ಮಲೆ ಮಹದೇಶ್ವರ ಪ್ರತಿಮೆ, ಹಂಪಿಯ ಕಲ್ಲಿನ ರಥ, ವಿರೂಪಾಕ್ಷ ವಿಗ್ರಹ, ಬ್ರಾಂಡ್ ಮೈಸೂರು ಲೋಗೋ, 8 ಬಾರಿ ಅಂಬಾರಿ ಹೊತ್ತ ಅರ್ಜುನ ಅನೆ ಆಕೃತಿ, ನಾಲ್ವಡಿ ಕೃಷ್ಣ ರಾಜ ಒಡೆಯರ್, ಕೆಂಪ ನಂಜಮ್ಮಣಿ, ಶ್ರಿ ಕಂತ ದತ್ತ ಒಡೆಯರ್, ಮೈಸೂರು ಅರಮನೆ ಮಂಡಳಿ, ಹಾಗೂ ವಿವಿಧ ರೀತಿಯ ಪ್ರಾಣಿಗಳ ಪ್ರತಿಮೆಗಳು ಕಂಡುಬಂದವು.  ಅದರ ಜತೆಗೆ ಇನ್ನಷ್ಟು ಕಲಾಕೃತಿಗಳು ಕೂಡಾ ಪ್ರವಾಸಿಗರಿಗೆ ಮುದ ನೀಡುತ್ತಿದೆ.

ಸೋಮನಾಥಪುರ ಚನ್ನಕೇಶವ ದೇವಾಲಯವನ್ನು ಕೆಂಗುಲಾಬಿ, ಚೆಂಡು ಹೂ ಹಾಗೂ ವಿವಿಧ ಬಗೆಯ ಗುಲಾಬಿಗಳಿಂದ 50 ಅಡಿ ಅಗಲ, 20 ಅಡಿ ಉದ್ದ, 28 ಅಡಿ ಎತ್ತರದಲ್ಲಿ ನಿರ್ಮಿಸಲಾಗಿದೆ.ಇನ್ನು ಅಂಬೇಡ್ಕರ್‌, ಮಹಾತ್ಮ ಗಾಂಧಿ, ಕಿತ್ತೂರು ರಾಣಿ ಚೆನ್ನಮ್ಮ ಹೂವಿನ ಕಲಾಕೃತಿಗಳು ಭಾರೀ ಆಕರ್ಷಿಸುತ್ತಿವೆ. ಮಕ್ಕಳಿಗಂತೂ ಸ್ಪೈಡರ್‌ ಮ್ಯಾನ್‌, ಬ್ಯಾಟ್‌ ಮ್ಯಾನ್‌, ಸೂಪರ್‌ ಮ್ಯಾನ್‌ ಭಾರೀ ಮುದ ನೀಡುತ್ತಿದೆ. ಹೀಗೆ 4 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಸಿಕೊಂಡು ನೂರಾರು ಕಲಾಕೃತಿಗಳನ್ನು ರಚಿಸಲಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

5 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

12 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

12 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

20 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

21 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago