Advertisement
ಸುದ್ದಿಗಳು

ಜ.26 ರಂದು ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನ | ಗಮನ ಸೆಳೆಯಲಿದೆ ಹಲವು ಮಳಿಗೆಗಳು | 10,000 ದಷ್ಟು ಹೂವಿನ ಗಿಡಗಳ ಅಲಂಕಾರ |

Share

ತೋಟಗಾರಿಕೆ ಇಲಾಖೆ, ಕದ್ರಿ ಉದ್ಯಾನವನ ಸಮಿತಿ ಹಾಗೂ ಮಂಗಳೂರಿನ ಸಿರಿ ತೋಟಗಾರಿಕೆ ಸಂಘ ಮತ್ತು ಇತರೆ ಅಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ ನಗರದ ಕದ್ರಿ ಉದ್ಯಾನವನದಲ್ಲಿ ಇದೇ ಜ. 26 ರಿಂದ 29 ರವರೆಗೆ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಚ್.ಆರ್. ನಾಯಕ್ ತಿಳಿಸಿದ್ದಾರೆ.

Advertisement
Advertisement
Advertisement
Advertisement

ಜ.26ರ ಬೆಳಿಗ್ಗೆ 10 ಗಂಟೆಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಫಲ ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡುವರು. ಜಿಲ್ಲೆಯ ಸಂಸದರು, ಶಾಸಕರು ಹಾಗೂ ಜನಪ್ರತಿನಿಧಿಗಳು ಸೇರಿದಂತೆ ಅಧಿಕಾರಿ ವರ್ಗದವರು ಭಾಗವಹಿಸಲಿದ್ದಾರೆ.

Advertisement

ತೋಟಗಾರಿಕೆ ಚಟುವಟಿಕೆಗಳು ಹಾಗೂ ಕಲೆಯನ್ನು ಸಾರ್ವಜನಿಕರಲ್ಲಿ ಉದ್ದೀಪನ ಗೊಳಿಸುವ ಮೂಲಕ ತೋಟಗಾರಿಕೆಯಲ್ಲಿ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಪರಿಸರ ಸಂರಕ್ಷಣೆ ಸಾರ್ವಜನಿಕ ನೈರ್ಮಲ್ಯ, ಗ್ರಾಮ, ನಗರಗಳನ್ನು ಸುಂದರಗೊಳಿಸುವುದು, ಮೌಲ್ಯವರ್ಧನೆ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಮೂಲಕ ತೋಟಗಾರಿಕೆ ಉದ್ದಿಮೆಯನ್ನು ಮುಂದಕ್ಕೆ ಕೊಂಡಯುವ ಉದ್ದೇಶವನ್ನು ಈ ಮೂಲಕ ಹೊಂದಲಾಗಿದೆ.

ಫಲಪುಷ್ಪ ಪ್ರದರ್ಶನದಲ್ಲಿರುವ ವಿಶೇಷತೆಗಳು:  ಹೂವಿನಿಂದ ಅಲಂಕರಿಸಿದ ಬಿಂದಿಗೆಯಿಂದ ನೀರು ಹರಿಯುವ ವಿನ್ಯಾಸದ ಮಾದರಿಯನ್ನು ಆಕರ್ಷಣಿಯವಾಗಿ ಅಲಂಕಾರಗೊಳಿಸಿ ಪ್ರದರ್ಶಿಸಲಾಗುವುದು. ತೋಟಗಾರಿಕೆ ಇಲಾಖಾ ವತಿಯಿಂದ ಬೆಳೆಸಲಾಗಿರುವ ವಿವಿಧ ಜಾತಿಯ ಆಕರ್ಷಣೀಯವಾದ ಸುಮಾರು 10,000 ದಷ್ಟು ಸೂರ್ಯಕಾಂತಿ (ಹಳದಿ, ಕೆಸರಿ) ಇತರೆ ಹೂವಿನ ಗಿಡಗಳನ್ನು ಪ್ರದರ್ಶನಕ್ಕೆ ಇಡಲಾಗುವುದು. ವಿವಿಧ ರೀತಿಯ ಗಿಡಗಳನ್ನು ಕುಂಡಗಳಲ್ಲಿ ಪ್ರದರ್ಶನಕ್ಕೆ ಇಡಲಾಗುವುದು. ತರಕಾರಿ ಕೆತ್ತನೆ, ವಿವಿಧ ಮಾದರಿಯ ಕಟ್ ಫ್ಲವರ್ ಜೋಡಣೆ ಮಾಡಿ ಪ್ರದರ್ಶನಕ್ಕೆ ಇಡಲಾಗುವುದು. ಕ್ಷೇತ್ರ/ನರ್ಸರಿಗಳಲ್ಲಿ ಬೆಳೆಸಿರುವ ವಿವಿಧ ಜಾತಿಯ ಗಿಡಗಳನ್ನು ಮತ್ತು ತರಕಾರಿ ಸಸಿಗಳ ಮಾರಾಟಕ್ಕೆ ಮಳಿಗೆಯನ್ನು ತೆರೆಯಲಾಗುವುದು.      ವಿವಿಧ ಜಾತಿಯ ತರಕಾರಿ ಪ್ರಾತ್ಯಕ್ಷತೆಯನ್ನು ಪ್ರದರ್ಶಿಸಲಾಗುವುದು.    ತಾಲೂಕುಗಳಿಂದ ರೈತರು ಬೆಳೆಸಿರುವ ವಿವಿಧ ಜಾತಿಯ ಹಣ್ಣು ಮತ್ತು ತರಕಾರಿಗಳನ್ನು ಪ್ರದರ್ಶನಕ್ಕೆ ಇಡಲಾಗುವುದು.ಸಾರ್ವಜನಿಕರು ಬೆಳೆದಿರುವ ಬೋನ್ಸಾಯಿ, ಅಂಥೋರಿಯಂ, ಆರ್ಕಿಡ್ ಗಿಡಗಳು ಇನ್ನಿತರೇ ಆಕರ್ಷಣೀಯವಾದ ಗಿಡಗಳನ್ನು ಪ್ರದರ್ಶನಕ್ಕೆ ಇಡಲಾಗುವುದು. ಸರಕಾರಿ ಇಲಾಖೆಗಳಿಂದ ಸಾರ್ವಜನಿಕರಿಗೆ ಸರ್ಕಾರಿ ಯೋಜನೆಗಳ ಬಗ್ಗೆ ಆಧುನಿಕ ತಂತ್ರಜ್ಞಾನದ ಮಾಹಿತಿ ನೀಡಲು ಪ್ರದರ್ಶನ ಮಳಿಗೆಗಳನ್ನು ತೆರೆಯಲಾಗುವುದು.

Advertisement
ಫಲಪುಷ್ಪ ಪ್ರದರ್ಶನದಲ್ಲಿ ಸುಮಾರು 125 ಮಳಿಗೆಗಳನ್ನು ತೆರೆಯಲಾಗಿದ್ದು, ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ಯಂತ್ರಗಳ ಮಾರಾಟಗಾರರು ಮಳಿಗೆಗಳನ್ನು ತೆರೆಯಲಿದ್ದು, ಸಾವಯವ ಉತ್ಪನ್ನಗಳು, ತೋಟಗಾರಿಕೆ ಉತ್ಪನ್ನಗಳು, ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸುವ ಹಾಗೂ ಉದ್ದಿಮೆದಾರರಿಂದ ಸಾರ್ವಜನಿಕರು ಖರೀದಿಸಲು ಹಾಗೂ ವೀಕ್ಷಿಸಲು ಅವಕಾಶವಿರುತ್ತದೆ.      ಫಲಪುಷ್ಪ ಪ್ರದರ್ಶನದ ವೀಕ್ಷಣೆಗೆ ವಯಸ್ಕರಿಗೆ 20, ಮಕ್ಕಳಿಗೆ 10ರೂ.ಗಳನ್ನು ನಿಗದಿ ಪಡಿಸಲಾಗಿದೆ, ಎಲ್ಲಾ ಶಾಲಾ ಮಕ್ಕಳಿಗೆ, ಹಿರಿಯ ನಾಗರಿಕರಿಗೆ, ವಿಕಲಚೇತನರಿಗೆ ಮತ್ತು ಭಿನ್ನ ಸಾರ್ಮಥ್ಯದ ಮಕ್ಕಳಿಗೆ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ ಎಂದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

7 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago