Advertisement
ಸುದ್ದಿಗಳು

ಮೇವು ಪೂರೈಸಿದರೂ ಬಿಲ್‌ ನೀಡಿಲ್ಲ..! | ಪ್ರಧಾನಿಗೆ ಪತ್ರ ಬರೆದ ಚಿಕ್ಕಬಳ್ಳಾಪುರದ ಉದ್ಯಮಿ |

Share

ರಾಜ್ಯದಲ್ಲಿ  ಮತ್ತೆ ಕಮಿಶನ್‌ ವ್ಯವಹಾರ ಸದ್ದು ಮಾಡುತ್ತಿದೆ. ಗುತ್ತಿಗೆದಾರರ ಸಂಘವು ಕಮಿಶನ್‌ ವ್ಯವಹಾರದ ಆರೋಪದ ಬೆನ್ನಲ್ಲೇ ಇದೀಗ ಮೇವು ವ್ಯವಹಾರದಲ್ಲೂ ಕಮಿಶನ್‌ ಬಗ್ಗೆ ಆರೋಪ ಬಂದಿದೆ. ಈ ಬಗ್ಗೆ ಉದ್ಯಮಿ ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ.

ಬೆಳಗಾವಿಯ ಸಂತೋಷ್ ಅವರು ಕಮಿಶನ್‌ ಆರೋಪ ಮಾಡಿ ಉಡುಪಿಯಲ್ಲಿ ಆತ್ಮಹತ್ಯೆ‌ ಪ್ರಕರಣ ನಡೆದ ಬಳಿಕ ರಾಜ್ಯದಲ್ಲಿ ಕಮಿಶನ್‌ ವ್ಯವಹಾರವು ಬಹುದೊಡ್ಡ ಸದ್ದು ಮಾಡಿದೆ. ಗುತ್ತಿಗೆದಾರರ ಸಂಘವು ಕಮಿಶನ್‌ ವ್ಯವಹಾರದ ಬಗ್ಗೆ ನೇರ ಆರೋಪ ಮಾಡಿದ್ದರೆ ಇದೀಗ ಚಿಕ್ಕಬಳ್ಳಾಪುರದಲ್ಲಿ ಬಹುಕೋಟಿ ಮೇವು ಹಗರಣ ಸದ್ದು‌ ಮಾಡಿದೆ. ಮೇವು ಪೂರೈಸಿದರೂ ಕಮಿಷನ್ ಕಾರಣ ನೀಡಿ ಬಿಲ್ ನೀಡಿಲ್ಲ ಎಂದು ಹರ್ಷ ಅಸೋಸಿಯೇಟ್ಸ್​ನ ಜಿ.ಎಂ ಸುರೇಶ್ ಎಂಬವರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಇದೀಗ ತಾನು ಸಾಲಕ್ಕೆ ಸಿಲುಕಿಕೊಂಡಿದ್ದು, ಪ್ರಾಣಕ್ಕೆ ಹಾನಿಯಾದರೆ ಇದೇ ಕಾರಣ ಎಂದು ಹೇಳಿದ್ದಾರೆ‌.

ಸುರೇಶ್ ಅವರು ರೈತರಿಂದ ಮೇವು ಖರೀದಿಸಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ 591 ಟನ್ ಮೇವು ಸರಬರಾಜು ಮಾಡಿದ್ದರು. ಆದರೆ ಕಮಿಷನ್ ಆಸೆಗಾಗಿ ಬೇಕೆಂದೇ ಬಿಲ್ ವಿಳಂಬ ಮಾಡುತ್ತಿದ್ದಾರೆ. ಹಳೇ ಡೇಟ್ ಗೆ ಪ್ರೊಸೀಡಿಂಗ್ಸ್ ಮಾಡಿ ಅನ್ಯಾಯ ಮಾಡಿದ್ದಾರೆ. ಹೈಕೋರ್ಟ್ ಆದೇಶ ನೀಡಿದ್ದರೂ ಸಹ ಬರಬೇಕಾದ ಬಿಲ್ ಬಂದಿಲ್ಲ. 3 ಲೋಡ್ ಮೇವಿಗೆ ಒಂದು ಲೋಡ್ ಮೇವಿನ ದರ ನೀಡುತ್ತಿದ್ದಾರೆ. ಇದಕ್ಕಾಗಿ ಹೇಳೇ ಡೇಟ್ ಗೆ ದಾಖಲೆ ತಯಾರಿಸಿದ್ದಾರೆ ಎಂದು ಸುರೇಶ್ ಪತ್ರದಲ್ಲಿ ಆರೋಪಿಸಿದ್ದಾರೆ.

ಆದರೆ, ಈ ಬಗ್ಗೆ  ಪ್ರತಿಕ್ರಿಯೆ ನೀಡಿರುವ ಪಶಸಂಗೋಪನೆ ಇಲಾಖೆ ಡೆಪ್ಯೂಟಿ ಡೈರೆಕ್ಟರ್ ಡಾ.ರವಿ ಅವರು ‘ಸುರೇಶ್ ಅವರು ಒಣ ಮೇವಿನ ಬದಲು ಹಸಿ ಮೇವನ್ನು ಪೂರೈಸಿದ್ದರು. 1 ಕೆಜಿ ಒಣ ಮೇವು, 3 ಕೆ.ಜಿ ಹಸಿ ಮೇವಿಗೆ ಸಮವಾಗುತ್ತದೆ. ಇದೇ ರೀತಿ ಡಿಸಿ ಆಫೀಸ್​​ನಿಂದ ಪೇಮೆಂಟ್ ಮಾಡಿದ್ದಾರೆ. ಆದ್ರೆ ಹೆಚ್ಚು ಪೇಮೆಂಟ್​ ಬೇಕೆಂದು ಸುರೇಶ್ ಅವರು ದೂರು ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

4 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

5 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago