Advertisement
ಸುದ್ದಿಗಳು

ಮೇವು ಪೂರೈಸಿದರೂ ಬಿಲ್‌ ನೀಡಿಲ್ಲ..! | ಪ್ರಧಾನಿಗೆ ಪತ್ರ ಬರೆದ ಚಿಕ್ಕಬಳ್ಳಾಪುರದ ಉದ್ಯಮಿ |

Share

ರಾಜ್ಯದಲ್ಲಿ  ಮತ್ತೆ ಕಮಿಶನ್‌ ವ್ಯವಹಾರ ಸದ್ದು ಮಾಡುತ್ತಿದೆ. ಗುತ್ತಿಗೆದಾರರ ಸಂಘವು ಕಮಿಶನ್‌ ವ್ಯವಹಾರದ ಆರೋಪದ ಬೆನ್ನಲ್ಲೇ ಇದೀಗ ಮೇವು ವ್ಯವಹಾರದಲ್ಲೂ ಕಮಿಶನ್‌ ಬಗ್ಗೆ ಆರೋಪ ಬಂದಿದೆ. ಈ ಬಗ್ಗೆ ಉದ್ಯಮಿ ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ.

ಬೆಳಗಾವಿಯ ಸಂತೋಷ್ ಅವರು ಕಮಿಶನ್‌ ಆರೋಪ ಮಾಡಿ ಉಡುಪಿಯಲ್ಲಿ ಆತ್ಮಹತ್ಯೆ‌ ಪ್ರಕರಣ ನಡೆದ ಬಳಿಕ ರಾಜ್ಯದಲ್ಲಿ ಕಮಿಶನ್‌ ವ್ಯವಹಾರವು ಬಹುದೊಡ್ಡ ಸದ್ದು ಮಾಡಿದೆ. ಗುತ್ತಿಗೆದಾರರ ಸಂಘವು ಕಮಿಶನ್‌ ವ್ಯವಹಾರದ ಬಗ್ಗೆ ನೇರ ಆರೋಪ ಮಾಡಿದ್ದರೆ ಇದೀಗ ಚಿಕ್ಕಬಳ್ಳಾಪುರದಲ್ಲಿ ಬಹುಕೋಟಿ ಮೇವು ಹಗರಣ ಸದ್ದು‌ ಮಾಡಿದೆ. ಮೇವು ಪೂರೈಸಿದರೂ ಕಮಿಷನ್ ಕಾರಣ ನೀಡಿ ಬಿಲ್ ನೀಡಿಲ್ಲ ಎಂದು ಹರ್ಷ ಅಸೋಸಿಯೇಟ್ಸ್​ನ ಜಿ.ಎಂ ಸುರೇಶ್ ಎಂಬವರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಇದೀಗ ತಾನು ಸಾಲಕ್ಕೆ ಸಿಲುಕಿಕೊಂಡಿದ್ದು, ಪ್ರಾಣಕ್ಕೆ ಹಾನಿಯಾದರೆ ಇದೇ ಕಾರಣ ಎಂದು ಹೇಳಿದ್ದಾರೆ‌.

ಸುರೇಶ್ ಅವರು ರೈತರಿಂದ ಮೇವು ಖರೀದಿಸಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ 591 ಟನ್ ಮೇವು ಸರಬರಾಜು ಮಾಡಿದ್ದರು. ಆದರೆ ಕಮಿಷನ್ ಆಸೆಗಾಗಿ ಬೇಕೆಂದೇ ಬಿಲ್ ವಿಳಂಬ ಮಾಡುತ್ತಿದ್ದಾರೆ. ಹಳೇ ಡೇಟ್ ಗೆ ಪ್ರೊಸೀಡಿಂಗ್ಸ್ ಮಾಡಿ ಅನ್ಯಾಯ ಮಾಡಿದ್ದಾರೆ. ಹೈಕೋರ್ಟ್ ಆದೇಶ ನೀಡಿದ್ದರೂ ಸಹ ಬರಬೇಕಾದ ಬಿಲ್ ಬಂದಿಲ್ಲ. 3 ಲೋಡ್ ಮೇವಿಗೆ ಒಂದು ಲೋಡ್ ಮೇವಿನ ದರ ನೀಡುತ್ತಿದ್ದಾರೆ. ಇದಕ್ಕಾಗಿ ಹೇಳೇ ಡೇಟ್ ಗೆ ದಾಖಲೆ ತಯಾರಿಸಿದ್ದಾರೆ ಎಂದು ಸುರೇಶ್ ಪತ್ರದಲ್ಲಿ ಆರೋಪಿಸಿದ್ದಾರೆ.

ಆದರೆ, ಈ ಬಗ್ಗೆ  ಪ್ರತಿಕ್ರಿಯೆ ನೀಡಿರುವ ಪಶಸಂಗೋಪನೆ ಇಲಾಖೆ ಡೆಪ್ಯೂಟಿ ಡೈರೆಕ್ಟರ್ ಡಾ.ರವಿ ಅವರು ‘ಸುರೇಶ್ ಅವರು ಒಣ ಮೇವಿನ ಬದಲು ಹಸಿ ಮೇವನ್ನು ಪೂರೈಸಿದ್ದರು. 1 ಕೆಜಿ ಒಣ ಮೇವು, 3 ಕೆ.ಜಿ ಹಸಿ ಮೇವಿಗೆ ಸಮವಾಗುತ್ತದೆ. ಇದೇ ರೀತಿ ಡಿಸಿ ಆಫೀಸ್​​ನಿಂದ ಪೇಮೆಂಟ್ ಮಾಡಿದ್ದಾರೆ. ಆದ್ರೆ ಹೆಚ್ಚು ಪೇಮೆಂಟ್​ ಬೇಕೆಂದು ಸುರೇಶ್ ಅವರು ದೂರು ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

36 minutes ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

11 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

11 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

3 days ago