ದೇಶದ ಎಲ್ಲ ನಾಗರಿಕರಿಗೂ ಆಹಾರ ಭದ್ರತೆ | ಪಡಿತರ ವ್ಯವಸ್ಥೆಯ ಲೋಪ ಸರಿಪಡಿಸಲು ಕ್ರಮ

November 18, 2024
10:19 AM

ದೇಶದ ಪ್ರತಿಯೊಬ್ಬರಿಗೂ ಆಹಾರ ಭದ್ರತೆ ಒದಗಿಸುವುದು ಸರ್ಕಾರದ ಪ್ರಮುಖ  ಕರ್ತವ್ಯವಾಗಿದೆ. ಇದಕ್ಕಾಗಿ  ಕೇಂದ್ರ ಸರ್ಕಾರ  ಪ್ರತಿವರ್ಷ  2 ಲಕ್ಷ 11 ಸಾವಿರ ಕೋಟಿ ರೂಪಾಯಿ  ವೆಚ್ಚ ಮಾಡುತ್ತಿದೆ ಎಂದು  ಕೇಂದ್ರ ಆಹಾರ ಮತ್ತು  ನಾಗರಿಕ ಪೂರೈಕೆ ಸಚಿವ  ಪ್ರಲ್ಹಾದ್ ಜೋಷಿ  ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ  ಸುದ್ದಿಗಾರರೊಂದಿಗೆ ಅವರು, ನಗರ ಪ್ರದೇಶದಲ್ಲಿ  ಶೇಕಡ 50ರಷ್ಟು, ಗ್ರಾಮೀಣ ಪ್ರದೇಶದಲ್ಲಿ  ಶೇಖಡ 75ರಷ್ಟು ಜನರಿಗೆ  ಉಚಿತ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ. ಆದರೆ ರಾಜ್ಯ ಸರ್ಕಾರ  ಎಪಿಎಲ್  ಪಡಿತರ ಚೀಟಿಗಳನ್ನು  ರದ್ದುಪಡಿಸಲು  ಉದ್ದೇಶಿಸಿದೆ. ಇದು  ಆತಂಕಕಾರಿ ವಿಷಯವಾಗಿದ್ದು, ಯಾವುದೇ ಕಾರಣಕ್ಕೂ  ಎಪಿಎಲ್  ಪಡಿತರ ಚೀಟಿಗಳನ್ನು  ರದ್ದುಪಡಿಸದಂತೆ  ರಾಜ್ಯ ಸರ್ಕಾರವನ್ನು  ತಾವು ಒತ್ತಾಯಿಸುವುದಾಗಿ ಹೇಳಿದ್ದಾರೆ.  ಇದಕ್ಕೂ  ಮುನ್ನ  ಅವರು,  ಗಾನ ಗಂಧರ್ವ ಪಂಡಿತ್  ಅರ್ಜುನ ಸಾ ನಾಕೋಡ  ರಾಷ್ಟ್ರೀಯ ಸ್ಮಾರಕ  ಟ್ರಸ್ಟ್ ಹಾಗೂ ಕ್ಷಮತಾ ಸೇವಾ ಸಂಸ್ಥೆ ಮತ್ತು ಸ್ವರ್ಣ ಗ್ರೂಪ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ  ಸಂಗೀತ ಮಹೋತ್ಸವ-24 ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಡಿತ್ ಬಾಲಚಂದ್ರ ನಾಕೋಡ, ಸ್ವರ್ಣ ಗ್ರೂಪ್ ಸಂಸ್ಥೆಯ ಮುಖ್ಯಸ್ಥ  ಸಿ.ಎಸ್.ವಿ.ಪ್ರಸಾದ್  ಸೇರಿದಂತೆ  ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಜಯತೀರ್ಥ್ ಮೆವುಂಡಿ  ಅವರ ತಂಡ  ಸುಮಧುರ ಗಾಯನ  ಪ್ರಸ್ತುತಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ
May 20, 2026
2:50 PM
by: ಸಾಯಿಶೇಖರ್ ಕರಿಕಳ
ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ
May 20, 2026
7:18 AM
by: ಮಿರರ್‌ ಡೆಸ್ಕ್
ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ
May 20, 2026
7:15 AM
by: ದ ರೂರಲ್ ಮಿರರ್.ಕಾಂ
ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!
May 19, 2026
11:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror