ಸುದ್ದಿಗಳು

ದೇಶದ ಎಲ್ಲ ನಾಗರಿಕರಿಗೂ ಆಹಾರ ಭದ್ರತೆ | ಪಡಿತರ ವ್ಯವಸ್ಥೆಯ ಲೋಪ ಸರಿಪಡಿಸಲು ಕ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶದ ಪ್ರತಿಯೊಬ್ಬರಿಗೂ ಆಹಾರ ಭದ್ರತೆ ಒದಗಿಸುವುದು ಸರ್ಕಾರದ ಪ್ರಮುಖ  ಕರ್ತವ್ಯವಾಗಿದೆ. ಇದಕ್ಕಾಗಿ  ಕೇಂದ್ರ ಸರ್ಕಾರ  ಪ್ರತಿವರ್ಷ  2 ಲಕ್ಷ 11 ಸಾವಿರ ಕೋಟಿ ರೂಪಾಯಿ  ವೆಚ್ಚ ಮಾಡುತ್ತಿದೆ ಎಂದು  ಕೇಂದ್ರ ಆಹಾರ ಮತ್ತು  ನಾಗರಿಕ ಪೂರೈಕೆ ಸಚಿವ  ಪ್ರಲ್ಹಾದ್ ಜೋಷಿ  ಹೇಳಿದ್ದಾರೆ.

Advertisement
Advertisement

ಹುಬ್ಬಳ್ಳಿಯಲ್ಲಿ  ಸುದ್ದಿಗಾರರೊಂದಿಗೆ ಅವರು, ನಗರ ಪ್ರದೇಶದಲ್ಲಿ  ಶೇಕಡ 50ರಷ್ಟು, ಗ್ರಾಮೀಣ ಪ್ರದೇಶದಲ್ಲಿ  ಶೇಖಡ 75ರಷ್ಟು ಜನರಿಗೆ  ಉಚಿತ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ. ಆದರೆ ರಾಜ್ಯ ಸರ್ಕಾರ  ಎಪಿಎಲ್  ಪಡಿತರ ಚೀಟಿಗಳನ್ನು  ರದ್ದುಪಡಿಸಲು  ಉದ್ದೇಶಿಸಿದೆ. ಇದು  ಆತಂಕಕಾರಿ ವಿಷಯವಾಗಿದ್ದು, ಯಾವುದೇ ಕಾರಣಕ್ಕೂ  ಎಪಿಎಲ್  ಪಡಿತರ ಚೀಟಿಗಳನ್ನು  ರದ್ದುಪಡಿಸದಂತೆ  ರಾಜ್ಯ ಸರ್ಕಾರವನ್ನು  ತಾವು ಒತ್ತಾಯಿಸುವುದಾಗಿ ಹೇಳಿದ್ದಾರೆ.  ಇದಕ್ಕೂ  ಮುನ್ನ  ಅವರು,  ಗಾನ ಗಂಧರ್ವ ಪಂಡಿತ್  ಅರ್ಜುನ ಸಾ ನಾಕೋಡ  ರಾಷ್ಟ್ರೀಯ ಸ್ಮಾರಕ  ಟ್ರಸ್ಟ್ ಹಾಗೂ ಕ್ಷಮತಾ ಸೇವಾ ಸಂಸ್ಥೆ ಮತ್ತು ಸ್ವರ್ಣ ಗ್ರೂಪ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ  ಸಂಗೀತ ಮಹೋತ್ಸವ-24 ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಡಿತ್ ಬಾಲಚಂದ್ರ ನಾಕೋಡ, ಸ್ವರ್ಣ ಗ್ರೂಪ್ ಸಂಸ್ಥೆಯ ಮುಖ್ಯಸ್ಥ  ಸಿ.ಎಸ್.ವಿ.ಪ್ರಸಾದ್  ಸೇರಿದಂತೆ  ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಜಯತೀರ್ಥ್ ಮೆವುಂಡಿ  ಅವರ ತಂಡ  ಸುಮಧುರ ಗಾಯನ  ಪ್ರಸ್ತುತಪಡಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

4 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

5 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

8 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

8 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

9 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 day ago