Advertisement
ಸುದ್ದಿಗಳು

ದೇಶದ ಎಲ್ಲ ನಾಗರಿಕರಿಗೂ ಆಹಾರ ಭದ್ರತೆ | ಪಡಿತರ ವ್ಯವಸ್ಥೆಯ ಲೋಪ ಸರಿಪಡಿಸಲು ಕ್ರಮ

Share

ದೇಶದ ಪ್ರತಿಯೊಬ್ಬರಿಗೂ ಆಹಾರ ಭದ್ರತೆ ಒದಗಿಸುವುದು ಸರ್ಕಾರದ ಪ್ರಮುಖ  ಕರ್ತವ್ಯವಾಗಿದೆ. ಇದಕ್ಕಾಗಿ  ಕೇಂದ್ರ ಸರ್ಕಾರ  ಪ್ರತಿವರ್ಷ  2 ಲಕ್ಷ 11 ಸಾವಿರ ಕೋಟಿ ರೂಪಾಯಿ  ವೆಚ್ಚ ಮಾಡುತ್ತಿದೆ ಎಂದು  ಕೇಂದ್ರ ಆಹಾರ ಮತ್ತು  ನಾಗರಿಕ ಪೂರೈಕೆ ಸಚಿವ  ಪ್ರಲ್ಹಾದ್ ಜೋಷಿ  ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ  ಸುದ್ದಿಗಾರರೊಂದಿಗೆ ಅವರು, ನಗರ ಪ್ರದೇಶದಲ್ಲಿ  ಶೇಕಡ 50ರಷ್ಟು, ಗ್ರಾಮೀಣ ಪ್ರದೇಶದಲ್ಲಿ  ಶೇಖಡ 75ರಷ್ಟು ಜನರಿಗೆ  ಉಚಿತ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ. ಆದರೆ ರಾಜ್ಯ ಸರ್ಕಾರ  ಎಪಿಎಲ್  ಪಡಿತರ ಚೀಟಿಗಳನ್ನು  ರದ್ದುಪಡಿಸಲು  ಉದ್ದೇಶಿಸಿದೆ. ಇದು  ಆತಂಕಕಾರಿ ವಿಷಯವಾಗಿದ್ದು, ಯಾವುದೇ ಕಾರಣಕ್ಕೂ  ಎಪಿಎಲ್  ಪಡಿತರ ಚೀಟಿಗಳನ್ನು  ರದ್ದುಪಡಿಸದಂತೆ  ರಾಜ್ಯ ಸರ್ಕಾರವನ್ನು  ತಾವು ಒತ್ತಾಯಿಸುವುದಾಗಿ ಹೇಳಿದ್ದಾರೆ.  ಇದಕ್ಕೂ  ಮುನ್ನ  ಅವರು,  ಗಾನ ಗಂಧರ್ವ ಪಂಡಿತ್  ಅರ್ಜುನ ಸಾ ನಾಕೋಡ  ರಾಷ್ಟ್ರೀಯ ಸ್ಮಾರಕ  ಟ್ರಸ್ಟ್ ಹಾಗೂ ಕ್ಷಮತಾ ಸೇವಾ ಸಂಸ್ಥೆ ಮತ್ತು ಸ್ವರ್ಣ ಗ್ರೂಪ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ  ಸಂಗೀತ ಮಹೋತ್ಸವ-24 ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಡಿತ್ ಬಾಲಚಂದ್ರ ನಾಕೋಡ, ಸ್ವರ್ಣ ಗ್ರೂಪ್ ಸಂಸ್ಥೆಯ ಮುಖ್ಯಸ್ಥ  ಸಿ.ಎಸ್.ವಿ.ಪ್ರಸಾದ್  ಸೇರಿದಂತೆ  ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಜಯತೀರ್ಥ್ ಮೆವುಂಡಿ  ಅವರ ತಂಡ  ಸುಮಧುರ ಗಾಯನ  ಪ್ರಸ್ತುತಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

7 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

7 hours ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

7 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

7 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

16 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

20 hours ago