ಕೇರಳ ರಾಜ್ಯದಲ್ಲಿ ಫುಡ್ ಪಾಯ್ಸನಿಂಗ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪಾರ್ಸೆಲ್ ಕೊಡುವ ಆಹಾರದ ಪೊಟ್ಟಣಗಳ ಮೇಲೆ ಆಹಾರ ತಯಾರಾದ ದಿನ ಹಾಗೂ ಅಂತಿಮ ದಿನದ ಅಥವಾ ಸಮಯ ಪ್ರಕಟಿಸುವುದನ್ನು ಕಡ್ಡಾಯಗೊಳಿಸಿದೆ.
ಇದನ್ನು ನಮೂದಿಸಿಲ್ಲದ ಆಹಾರ ಪದಾರ್ಥಗಳನ್ನು ನಿಷೇಧಿಸಿದೆ. ಆಹಾರ ತಯಾರಿಸಿದ ದಿನಾಂಕ ಮತ್ತು ಸಮಯ, ಪ್ಯಾಕ್ ಮಾಡಲಾದ ದಿನಾಂಕ ಮತ್ತು ಸಮಯ, ಆಹಾರವನ್ನು ತಿನ್ನಬಹುದಾದ ಅಂತಿಮ ದಿನಾಂಕವನ್ನು ಪ್ರಕಟಿಸುವುದು ಕಡ್ಡಾಯ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
‘ಆಹಾರ ಸುರಕ್ಷತಾ ಮಾನದಂಡದ ನಿಯಮಗಳ ಪ್ರಕಾರ, ಬಿಸಿ ಆಹಾರಗಳನ್ನು ತಯಾರಿಸಿದ 2 ಗಂಟೆಗಳ ಒಳಗೆ ತಿನ್ನಬೇಕು. ಇಂತಹ ಆಹಾರಗಳನ್ನು ಸಾಗಿಸುವಾಗ 60 ಡಿಗ್ರಿ ಉಷ್ಣಾಂಶ ಇರುವಂತೆ ನೋಡಿಕೊಳ್ಳಬೇಕು. 2 ಗಂಟೆಗಳಿಗೂ ಹೆಚ್ಚು ಕಾಲ ಸಾಮಾನ್ಯ ತಾಪಮಾನಕ್ಕೆ ತೆರೆದಿಟ್ಟಆಹಾರ ಪದಾರ್ಥವನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಸುರಕ್ಷತಾ ಚೀಟಿಗಳು ಮತ್ತು ಎಕ್ಸ್ಪೈರಿ ದಿನಾಂಕಗಳಿಲ್ಲದ ಆಹಾರ ಪದಾರ್ಥಗಳ ಪೊಟ್ಟಣಗಳನ್ನು ನಿಷೇಧಿಸಲಾಗಿದೆ’ ಎಂದು ಅವರು ಹೇಳಿದ್ದಾರೆ .
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…