ಕೇರಳ ರಾಜ್ಯದಲ್ಲಿ ಫುಡ್ ಪಾಯ್ಸನಿಂಗ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪಾರ್ಸೆಲ್ ಕೊಡುವ ಆಹಾರದ ಪೊಟ್ಟಣಗಳ ಮೇಲೆ ಆಹಾರ ತಯಾರಾದ ದಿನ ಹಾಗೂ ಅಂತಿಮ ದಿನದ ಅಥವಾ ಸಮಯ ಪ್ರಕಟಿಸುವುದನ್ನು ಕಡ್ಡಾಯಗೊಳಿಸಿದೆ.
ಇದನ್ನು ನಮೂದಿಸಿಲ್ಲದ ಆಹಾರ ಪದಾರ್ಥಗಳನ್ನು ನಿಷೇಧಿಸಿದೆ. ಆಹಾರ ತಯಾರಿಸಿದ ದಿನಾಂಕ ಮತ್ತು ಸಮಯ, ಪ್ಯಾಕ್ ಮಾಡಲಾದ ದಿನಾಂಕ ಮತ್ತು ಸಮಯ, ಆಹಾರವನ್ನು ತಿನ್ನಬಹುದಾದ ಅಂತಿಮ ದಿನಾಂಕವನ್ನು ಪ್ರಕಟಿಸುವುದು ಕಡ್ಡಾಯ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
‘ಆಹಾರ ಸುರಕ್ಷತಾ ಮಾನದಂಡದ ನಿಯಮಗಳ ಪ್ರಕಾರ, ಬಿಸಿ ಆಹಾರಗಳನ್ನು ತಯಾರಿಸಿದ 2 ಗಂಟೆಗಳ ಒಳಗೆ ತಿನ್ನಬೇಕು. ಇಂತಹ ಆಹಾರಗಳನ್ನು ಸಾಗಿಸುವಾಗ 60 ಡಿಗ್ರಿ ಉಷ್ಣಾಂಶ ಇರುವಂತೆ ನೋಡಿಕೊಳ್ಳಬೇಕು. 2 ಗಂಟೆಗಳಿಗೂ ಹೆಚ್ಚು ಕಾಲ ಸಾಮಾನ್ಯ ತಾಪಮಾನಕ್ಕೆ ತೆರೆದಿಟ್ಟಆಹಾರ ಪದಾರ್ಥವನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಸುರಕ್ಷತಾ ಚೀಟಿಗಳು ಮತ್ತು ಎಕ್ಸ್ಪೈರಿ ದಿನಾಂಕಗಳಿಲ್ಲದ ಆಹಾರ ಪದಾರ್ಥಗಳ ಪೊಟ್ಟಣಗಳನ್ನು ನಿಷೇಧಿಸಲಾಗಿದೆ’ ಎಂದು ಅವರು ಹೇಳಿದ್ದಾರೆ .
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…