ಕೇರಳ ರಾಜ್ಯದಲ್ಲಿ ಫುಡ್ ಪಾಯ್ಸನಿಂಗ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪಾರ್ಸೆಲ್ ಕೊಡುವ ಆಹಾರದ ಪೊಟ್ಟಣಗಳ ಮೇಲೆ ಆಹಾರ ತಯಾರಾದ ದಿನ ಹಾಗೂ ಅಂತಿಮ ದಿನದ ಅಥವಾ ಸಮಯ ಪ್ರಕಟಿಸುವುದನ್ನು ಕಡ್ಡಾಯಗೊಳಿಸಿದೆ.
ಇದನ್ನು ನಮೂದಿಸಿಲ್ಲದ ಆಹಾರ ಪದಾರ್ಥಗಳನ್ನು ನಿಷೇಧಿಸಿದೆ. ಆಹಾರ ತಯಾರಿಸಿದ ದಿನಾಂಕ ಮತ್ತು ಸಮಯ, ಪ್ಯಾಕ್ ಮಾಡಲಾದ ದಿನಾಂಕ ಮತ್ತು ಸಮಯ, ಆಹಾರವನ್ನು ತಿನ್ನಬಹುದಾದ ಅಂತಿಮ ದಿನಾಂಕವನ್ನು ಪ್ರಕಟಿಸುವುದು ಕಡ್ಡಾಯ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
‘ಆಹಾರ ಸುರಕ್ಷತಾ ಮಾನದಂಡದ ನಿಯಮಗಳ ಪ್ರಕಾರ, ಬಿಸಿ ಆಹಾರಗಳನ್ನು ತಯಾರಿಸಿದ 2 ಗಂಟೆಗಳ ಒಳಗೆ ತಿನ್ನಬೇಕು. ಇಂತಹ ಆಹಾರಗಳನ್ನು ಸಾಗಿಸುವಾಗ 60 ಡಿಗ್ರಿ ಉಷ್ಣಾಂಶ ಇರುವಂತೆ ನೋಡಿಕೊಳ್ಳಬೇಕು. 2 ಗಂಟೆಗಳಿಗೂ ಹೆಚ್ಚು ಕಾಲ ಸಾಮಾನ್ಯ ತಾಪಮಾನಕ್ಕೆ ತೆರೆದಿಟ್ಟಆಹಾರ ಪದಾರ್ಥವನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಸುರಕ್ಷತಾ ಚೀಟಿಗಳು ಮತ್ತು ಎಕ್ಸ್ಪೈರಿ ದಿನಾಂಕಗಳಿಲ್ಲದ ಆಹಾರ ಪದಾರ್ಥಗಳ ಪೊಟ್ಟಣಗಳನ್ನು ನಿಷೇಧಿಸಲಾಗಿದೆ’ ಎಂದು ಅವರು ಹೇಳಿದ್ದಾರೆ .
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…